ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಶನಿವಾರ ಬಿಜೆಪಿಯ ಹಿರಿಯ ನಾಯಕ ಮತ್ತು ಮಾಜಿ ಉಪ ಪ್ರಧಾನಿ ಎಲ್.ಕೆ. ಅಡ್ವಾಣಿ ಅವರನ್ನು ಭೇಟಿಯಾಗಿ ಹುಟ್ಟುಹಬ್ಬದ ಶುಭಾಶಯ ಕೋರಿದರು.
ಅಡ್ವಾಣಿ ಅವರ ನಿವಾಸಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಪುಷ್ಪಗುಚ್ಛ ನೀಡಿ ಶುಭಾಶಯ ಕೋರಿದ್ದಾರೆ.
ಇದಕ್ಕೂ ಮುನ್ನ, ಪ್ರಧಾನಿ ಮೋದಿ ಅವರು ಸಾಮಾಜಿಕ ಮಾಧ್ಯಮದಲ್ಲಿ ಅಡ್ವಾಣಿ ಅವರನ್ನು “ಉನ್ನತ ದೃಷ್ಟಿಕೋನ ಹೊಂದಿರುವ ರಾಜನೀತಿಜ್ಞ” ಎಂದು ಬಣ್ಣಿಸಿದರು. ರಾಷ್ಟ್ರೀಯ ರಾಜಕೀಯದಲ್ಲಿ ಬಿಜೆಪಿಯ ಉದಯಕ್ಕೆ ಕಾರಣರಾದ ಅಡ್ವಾಣಿ ಅವರಿಗೆ ಶನಿವಾರ 98 ವರ್ಷ ತುಂಬಿತು. ಈ ವರ್ಷ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನ ಪ್ರಶಸ್ತಿ ನೀಡಲಾಯಿತು.
ಎಲ್.ಕೆ. ಅಡ್ವಾಣಿ ಜಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಅತ್ಯುನ್ನತ ದೃಷ್ಟಿಕೋನ ಮತ್ತು ಬುದ್ಧಿಶಕ್ತಿಯಿಂದ ಆಶೀರ್ವದಿಸಲ್ಪಟ್ಟ ರಾಜಕಾರಣಿ, ಅಡ್ವಾಣಿ ಅವರ ಜೀವನವು ಭಾರತದ ಪ್ರಗತಿಯನ್ನು ಬಲಪಡಿಸಲು ಸಮರ್ಪಿತವಾಗಿದೆ ಎಂದು ಮೋದಿ ತಿಳಿಸಿದ್ದಾರೆ.
ಅವರು ಯಾವಾಗಲೂ ನಿಸ್ವಾರ್ಥ ಕರ್ತವ್ಯದ ಮನೋಭಾವ ಮತ್ತು ದೃಢ ತತ್ವಗಳನ್ನು ಸಾಕಾರಗೊಳಿಸಿದ್ದಾರೆ. ಅವರ ಕೊಡುಗೆಗಳು ಭಾರತದ ಪ್ರಜಾಪ್ರಭುತ್ವ ಮತ್ತು ಸಾಂಸ್ಕೃತಿಕ ಭೂದೃಶ್ಯದ ಮೇಲೆ ಅಳಿಸಲಾಗದ ಗುರುತು ಬಿಟ್ಟಿವೆ. ಅವರಿಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯ ಸಿಗಲಿ ಎಂದು ಹಾರೈಸಿದ್ದಾರೆ.
Went to Shri LK Advani Ji's residence and greeted him on the occasion of his birthday. His service to our nation is monumental and greatly motivates us all. pic.twitter.com/02Y1LvZRYR
— Narendra Modi (@narendramodi) November 8, 2025
