ಬೆಂಗಳೂರು : ಬೆಂಗಳೂರಿನ ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಸಾಮೂಹಿಕ ನಮಾಜ್ ಮಾಡಲಾಗಿದ್ದು, ವೀಡಿಯೋ ವೈರಲ್ ಆಗಿದೆ.
ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ರಲ್ಲಿ ಕೆಲವರು ಸಾಮೂಹಿಕವಾಗಿ ನಮಾಜ್ ಮಾಡಿದ್ದು, ವಿಡಿಯೋ ವೈರಲ್ ಆಗಿದೆ. ವಿಡಿಯೋ ವ್ಯಾಪಕ ಟೀಕೆಗೆ ಕಾರಣವಾಗಿದೆ. ಹಜ್ ಯಾತ್ರಿಕರನ್ನು ಬೀಳ್ಕೊಡಲು ವಿಮಾನ ನಿಲ್ದಾಣಕ್ಕೆ ಬಂದಿದ್ದ ಕೆಲವರು ನಮಾಜ್ ಮಾಡಿದ್ದಾರೆ ಎನ್ನಲಾಗಿದೆ.
ಬಿಜೆಪಿ ಕಿಡಿ
ಬೆಂಗಳೂರು ವಿಮಾನ ನಿಲ್ದಾಣದ ಆವರಣದಲ್ಲಿ ನಮಾಜ್ ಮಾಡುವುದನ್ನು ಕರ್ನಾಟಕ ಬಿಜೆಪಿ ಟೀಕಿಸಿದ್ದು, ಹೆಚ್ಚಿನ ಭದ್ರತಾ ವಲಯದಲ್ಲಿ ಇಂತಹ ಕೃತ್ಯಕ್ಕೆ ಹೇಗೆ ಅವಕಾಶ ನೀಡಲಾಗಿದೆ ಎಂದು ಪ್ರಶ್ನಿಸಿದೆ. ಪಕ್ಷದ ವಕ್ತಾರ ವಿಜಯ್ ಪ್ರಸಾದ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಐಟಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಂದ ಅನುಮೋದನೆ ಪಡೆದ ಆರೋಪದ ಬಗ್ಗೆ ಸ್ಪಷ್ಟೀಕರಣವನ್ನು ಕೋರಿದ್ದಾರೆ.
“ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟಿ2 ಟರ್ಮಿನಲ್ ಒಳಗೆ ಇದನ್ನು ಹೇಗೆ ಅನುಮತಿಸಲಾಗಿದೆ? ಮಾನ್ಯ ಮುಖ್ಯಮಂತ್ರಿ @siddaramaiah ಮತ್ತು ಸಚಿವ @PriyankKharge ಅವರೇ, ನೀವು ಇದನ್ನು ಅನುಮೋದಿಸುತ್ತೀರಾ? ಈ ವ್ಯಕ್ತಿಗಳು ಹೆಚ್ಚಿನ ಭದ್ರತೆಯ ವಿಮಾನ ನಿಲ್ದಾಣ ವಲಯದಲ್ಲಿ ನಮಾಜ್ ಮಾಡಲು ಪೂರ್ವಾನುಮತಿ ಪಡೆದಿದ್ದಾರೆಯೇ?” ಎಂದು ಬರೆದಿರುವ ಬಿಜೆಪಿ ನಾಯಕ ವಿಜಯ್ ಪ್ರಸಾದ್, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಐಟಿ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಪ್ರಶ್ನಿಸಿದ್ದಾರೆ. ಪಥ ಸಂಚಲನದಂತಹ ಆರ್ಎಸ್ಎಸ್ ಕಾರ್ಯಕ್ರಮಗಳು ಸರಿಯಾದ ಕಾರ್ಯವಿಧಾನವನ್ನು ಅನುಸರಿಸುತ್ತವೆ ಆದರೆ ಇಂತಹ ಚಟುವಟಿಕೆಗಳಿಗೆ “ಕಣ್ಣು ಮುಚ್ಚಿ ಕುಳಿತಿರುತ್ತದೆ ಎಂದರು.
How is this even allowed inside the T2 Terminal of Bengaluru International Airport?
— Vijay Prasad (@vijayrpbjp) November 9, 2025
Hon’ble Chief Minister @siddaramaiah and Minister @PriyankKharge do you approve of this?
Did these individuals obtain prior permission to offer Namaz in a high-security airport zone?
Why is it… pic.twitter.com/iwWK2rYWZa
