ಬೆಂಗಳೂರು : ಬೆಂಗಳೂರಲ್ಲಿ ‘ಜಿಬಿಎ’ ( ಗ್ರೇಟರ್ ಬೆಂಗಳೂರು ಪ್ರಾಧಿಕಾರ) ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.
ಯೆಸ್, ಕಾರ್ಪೊರೇಷನ್ ಸರ್ಕಲ್ ಬಳಿ ಇರುವ ಟಿವಿಸಿಸಿ ಕಚೇರಿ ಮೇಲೆ ಈ ದಾಳಿ ನಡೆದಿದೆ. ಇದಲ್ಲದೇ ಲೋಕಾಯುಕ್ತ ತಂಡ ಏಳು ವಿಭಿನ್ನ ಸ್ಥಳಗಳಲ್ಲಿ ದಾಳಿ ನಡೆಸಿದೆ.
ಲೋಕಾಯುಕ್ತ ಇನ್ಸ್ ಪೆಕ್ಟರ್ ಗೋವಿಂದರಾಜು ನೇತೃತ್ವದ ಐದು ಸದಸ್ಯರ ತಂಡ ಈ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದೆ. ಆರ್ ಆರ್ ನಗರ ವ್ಯಾಪ್ತಿಯಲ್ಲಿ ಕಳಪೆ ಕಾಮಗಾರಿ ನಡೆದಿದೆ ಎಂದು ದೂರು ಕೇಳಿಬಂದ ಹಿನ್ನೆಲೆ ಲೋಕಾಯುಕ್ತ ಅಧಿಕಾರಿಗಳು ಧಿಡೀರ್ ದಾಳಿ ನಡೆಸಿದ್ದಾರೆ.
