ತುಮಕೂರು : ಚಾಕುವಿನಿಂದ ಚುಚ್ಚಿ ಯುವಕನನ್ನ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ತುಮಕೂರು ನಗರದ ಜಯನಗರ ಸಮೀಪದ ಮಂಜುನಾಥ ನಗರದಲ್ಲಿ ನಡೆದಿದೆ.
ಕೊಲೆಯಾದ ಯುವಕನನ್ನ ಅಭಿಷೇಕ್ (26) ಎಂದು ಗುರುತಿಸಲಾಗಿದೆ. ಕ್ಯಾತಸಂದ್ರ ಸಮೀಪ ಸುಭಾಷ್ ನಗರ ನಿವಾಸಿ ಅಭಿಷೇಕ್ ನನ್ನು ದುಷ್ಕರ್ಮಿಗಳಿ ಚಾಕು ಚುಚ್ಚಿ ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ಕೊಲೆಗೆ ನಿಖ ಕಾರಣ ತಿಳಿದು ಬಂದಿಲ್ಲ .
ಘಟನೆ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
