ಬೆಂಗಳೂರು : ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ನಿಧನದಿಂದ ನಾಡು ಬಡವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ.
ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿದ ಸಿಎಂ ಸಿದ್ದರಾಮಯ್ಯ ವೃಕ್ಷಮಾತೆ ಸಾಲುಮರದ ತಿಮ್ಮಕ್ಕನವರ ನಿಧನದ ಸುದ್ದಿ ತಿಳಿದು ದುಃಖಿತನಾಗಿದ್ದೇನೆ. ಸಾವಿರಾರು ಗಿಡಗಳನ್ನು ನೆಟ್ಟು, ಅವುಗಳನ್ನು ಮಕ್ಕಳಂತೆ ಸಲಹಿದ ತಿಮ್ಮಕ್ಕನವರು ತಮ್ಮ ಬಹುಪಾಲು ಜೀವಿತ ಕಾಲವನ್ನು ಪರಿಸರ ಸಂರಕ್ಷಣೆಗಾಗಿ ಮುಡಿಪಾಗಿಟ್ಟವರು. ಇಂದು ತಿಮ್ಮಕ್ಕನವರು ನಮ್ಮನ್ನು ಅಗಲಿದರೂ ಅವರ ಪರಿಸರ ಪ್ರೇಮ ಅವರನ್ನು ಚಿರಸ್ಥಾಯಿಯಾಗಿಸಿದೆ. ಅಗಲಿದ ಮಹಾಚೇತನಕ್ಕೆ ನನ್ನ ನಮನಗಳು. ಸಾಲುಮರದ ತಿಮ್ಮಕ್ಕನವರ ನಿಧನದಿಂದ ನಾಡು ಬಡವಾಗಿದೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಕುಟುಂಬವರ್ಗಕ್ಕೆ ನನ್ನ ಸಂತಾಪಗಳು ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ.
ವೃಕ್ಷಮಾತೆ ಸಾಲುಮರದ ತಿಮ್ಮಕ್ಕನವರ ನಿಧನದ ಸುದ್ದಿ ತಿಳಿದು ದುಃಖಿತನಾಗಿದ್ದೇನೆ. ಸಾವಿರಾರು ಗಿಡಗಳನ್ನು ನೆಟ್ಟು, ಅವುಗಳನ್ನು ಮಕ್ಕಳಂತೆ ಸಲಹಿದ ತಿಮ್ಮಕ್ಕನವರು ತಮ್ಮ ಬಹುಪಾಲು ಜೀವಿತ ಕಾಲವನ್ನು ಪರಿಸರ ಸಂರಕ್ಷಣೆಗಾಗಿ ಮುಡಿಪಾಗಿಟ್ಟವರು.
— Siddaramaiah (@siddaramaiah) November 14, 2025
ಇಂದು ತಿಮ್ಮಕ್ಕನವರು ನಮ್ಮನ್ನು ಅಗಲಿದರೂ ಅವರ ಪರಿಸರ ಪ್ರೇಮ ಅವರನ್ನು ಚಿರಸ್ಥಾಯಿಯಾಗಿಸಿದೆ.… pic.twitter.com/4xYdXQyZUa
