SHOCKING : ರಾಜ್ಯದಲ್ಲಿ ಮತ್ತೊಂದು ಹೀನ ಕೃತ್ಯ : ಭಾವನಿಂದಲೇ ಅಪ್ರಾಪ್ತೆ ನಾದಿನಿ ಮೇಲೆ ಅತ್ಯಾಚಾರ.!

ಬೆಂಗಳೂರು : ರಾಜ್ಯದಲ್ಲಿ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿದ್ದು, ಆತಂಕಕ್ಕೆ ಕಾರಣವಾಗಿದೆ. ರಾಜ್ಯದಲ್ಲಿ ಮತ್ತೊಂದು ಹೀನ ಕೃತ್ಯವೊಂದು ನಡೆದಿದ್ದು, ನಾದಿನಿ ಮೇಲೆ ಭಾವನೇ ಅತ್ಯಾಚಾರ ಎಸಗಿದ ಘಟನೆ ಯಾದಗಿರಿ ಜಿಲ್ಲೆಯ ಸುರಪುರದಲ್ಲಿ ನಡೆದಿದೆ.

ಸುರಪುರ ತಾಲೂಕಿನ ಕೆಂಭಾವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಅಪ್ರಾಪ್ತ ಬಾಲಕಿ ಆರೋಗ್ಯ ತಪಾಸಣೆಗಂತ ಹೋದಾಗ ಈ ಪ್ರಕರಣ ಬೆಳಕಿಗೆ ಬಂದಿದೆ.

ಬಾಲಕಿಯನ್ನ ತಪಾಸಣೆ ಮಾಡಿದಾಗ ಆಕೆ ಗರ್ಭಿಣಿಯಾಗಿರುವುದು ಧೃಡವಾಗಿದೆ. ಪೋಷಕರು ಬಾಲಕಿಯನ್ನ ವಿಚಾರಿಸಿದಾಗ ಭಾವ ತನ್ನ ಮೇಲೆ ಅತ್ಯಾಚಾರ ಎಸಗಿರುವುದಾಗಿ ಹೇಳಿದ್ದಾನೆ.ಸದ್ಯ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಾಗಿ ಬಲೆ ಬೀಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read