BREAKING : ಬೆಂಗಳೂರಲ್ಲಿ 7.11 ಕೋಟಿ ರಾಬರಿ ಕೇಸ್ : ಆಂಧ್ರದ ತಿರುಪತಿಯಲ್ಲಿ ದರೋಡೆಕೋರರ ಕಾರು ಪತ್ತೆ.!

ಬೆಂಗಳೂರು : ಬೆಂಗಳೂರಿನಲ್ಲಿ 7.11 ಕೋಟಿ ರೂ. ದರೋಡೆ ಕೇಸ್ ಗೆ ಸಂಬಂಧಿಸಿದಂತೆ ದರೋಡೆಗೆ ಬಳಸಿದ್ದ ಕಾರು ಆಂಧ್ರದ ತಿರುಪತಿಯಲ್ಲಿ ಪತ್ತೆಯಾಗಿದೆ.ಇನ್ನೋವಾ ಕಾರನ್ನು ಬೆಂಗಳೂರಿನ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಆಂಧ್ರದ ತಿರುಪತಿಯಲ್ಲಿ ದರೋಡೆಗೆ ಬಳಸಿದ್ದ ಕಾರು ಪತ್ತೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಆರೋಪಿಗಳು ಕೂಡ ಸದ್ಯದಲ್ಲೇ ಪೊಲೀಸರ ಬಲೆಗೆ ಬೀಳಲಿದ್ದಾರೆ.ದರೋಡೆಕೋರರ ಗ್ಯಾಂಗ್ ತಿರುಪತಿಯಲ್ಲಿರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ತಿರುಪತಿ ಪೊಲೀಸರ ಜೊತೆ ಬೆಂಗಳೂರಿನ ದಕ್ಷಿಣ ವಿಭಾಗದ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ.

ತಿರುಪತಿಯ ಪ್ರತಿಯೊಂದು ಹೋಟೆಲ್, ಲಾಡ್ಜ್ ಗಳಲ್ಲಿ ಪೊಲೀಸರು ತಪಾಸಣೆ ನಡೆಸುತ್ತಿದ್ದಾರೆ. ಹಣ ಬೇರೆ ಕಡೆ ಇಟ್ಟು ಆರೋಪಿಗಳು ತಿರುಪತಿಯಲ್ಲಿ ತಲೆಮರೆಸಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಬೆಂಗಳೂರಲ್ಲಿ 7 ಕೋಟಿ ರೂ. ರಾಬರಿ ಕೇಸ್ ಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

ಎಲ್ಲಾ ಆಯಾಮಗಳಲ್ಲೂ ಪೊಲೀಸರು ತನಿಖೆ ನಡೆಸುತ್ತಿದ್ದು, ಸುಮಾರು 20 ಮಂದಿಯನ್ನ ವಿಚಾರಣೆ ನಡೆಸಿದ್ದಾರೆ.ಆರ್ ಬಿ ಎ ಅಧಿಕಾರಿಗಳ ಸೋಗಿನಲ್ಲಿ ಎಟಿಎಂಗೆ ಹಣ ಹಾಕುವ ವಾಹನ ಅಡ್ಡಗಟ್ಟಿದ ದುಷ್ಕರ್ಮಿಗಳು ಬರೋಬ್ಬರಿ 7.11 ಕೋಟಿ ಹಣ ದೋಚಿ ಪರಾರಿಯಾಗಿದ್ದಾರೆ. ಬೆಂಗಳೂರಿನ ಜಯದೇವ ಡೇರಿ ಸರ್ಕಲ್ ನಲ್ಲಿ ಈ ಘಟನೆ ನಡೆದಿದೆ. ಇನ್ನೋವಾ ಕಾರಿನಲ್ಲಿ ಬಂದ 7-8 ಮಂದಿ ದುಷ್ಕರ್ಮಿಗಳು ನಾವು ಆರ್ ಬಿ ಐ ಅಧಿಕಾರಿಗಳು ಎಂದು ವಾಹನವನ್ನ ಅಟ್ಟಗಟ್ಟಿದ್ದಾರೆ. ನಿಮ್ಮ ವಾಹನವನ್ನ ನಾವು ಪರಿಶೀಲನೆ ನಡೆಸುತ್ತೇವೆ ಎಂದು ಹೇಳಿದ ಗ್ಯಾಂಗ್ ಗನ್ ಮ್ಯಾನ್ ಹಾಗೂ ಅಧಿಕಾರಿಗಳಿಗೆ ಬೆದರಿಕೆ ಹಾಕಿದ್ದಾರೆ. ಒಂದು ವಾಹನದಿಂದ ಇನ್ನೊಂದು ವಾಹನಕ್ಕೆ ಹಣ ಶಿಫ್ಟ್ ಮಾಡುತ್ತಿದ್ದಾಗ ಗ್ಯಾಂಗ್ ದರೋಡೆ ಮಾಡಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read