ಚಿಕ್ಕಬಳ್ಳಾಪುರ : ವಿಚ್ಚೇದಿತ ಮಹಿಳೆಯರಿಗೆ ವಂಚಿಸುತ್ತಿದ್ದ ಆರೋಪಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯಲ್ಲಿ ನಡೆದಿದೆ.
ಹತ್ತಾರು ಮಹಿಳೆಯರಿಗೆ ವಂಚನೆ ಎಸಗಿದ ಆರೋಪಿ ಸಿಎಂ ಗಿರೀಶ್ ಸೂಸೈಡ್ ಮಾಡಿಕೊಂಡಿದ್ದಾನೆ. ವಂಚನೆ ಪ್ರಕರಣ ಸಂಬಂಧ ನಾಲ್ವರು ಸಂತ್ರಸ್ತ ಮಹಿಳೆಯರು ದೂರು ನೀಡಿದ್ದರು. ಈ ಸಂಬಂಧ ಚಿಕ್ಕಬಳ್ಳಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ದೂರು ದಾಖಲಾಗುತ್ತಿದ್ದಂತೆ ಈತ ನೇಣಿಗೆ ಶರಣಾಗಿದ್ದಾನೆ ಎನ್ನಲಾಗಿದೆ.
ಮರು ಮದುವೆಯ ಹೆಸರಿನಲ್ಲಿ ದೋಖಾ ಆರೋಪ
ಫೇಸ್ ಬುಕ್ ಹಾಗೂ ಇನ್ಸ್ಟಾಗ್ರಾಂ ಖಾತೆಯ ಮೂಲಕ ಮಹಿಳೆಯರಿಗೆ ಗಾಳ ಹಾಕಿ ಅವರನ್ನ ಮದುವೆಯಾಗಿ ಲೈಂಗಿಕ ಸಂಪರ್ಕ ಬೆಳೆಸಿ , ಅದನ್ನ ವಿಡಿಯೋ ರೆಕಾರ್ಡ್ ಮಾಡಿಕೊಳ್ಳುತ್ತಿದ್ದನು. ನಂತರ ವಿಡಿಯೋ ತೋರಿಸಿ ಬ್ಲ್ಯಾಕ್ ಮೇಲ್ ಮಾಡಿ ಅವರಿಂದ ಹಣ ವಸೂಲಿ ಮಾಡುತ್ತಿದ್ದನು. ಹೀಗೆ ಹತ್ತಾರು ಮಹಿಳೆಯರಿಗೆ ಈತ ಮೋಸ ಮಾಡಿದ್ದು, ಸಂತ್ರಸ್ತ ಮಹಿಳೆಯರು ಪೊಲೀಸರ ಮೊರೆ ಹೋಗಿದ್ದರು. ಶ್ರೀಮಂತ ಮಹಿಳೆಯರನ್ನ ಈತ ಟಾರ್ಗೆಟ್ ಮಾಡಿಕೊಂಡಿದ್ದನು. ಮಹಿಳೆಯರನ್ನ ಮದುವೆ ಆಗುತ್ತೇನೆ ಎಂದು ನಂಬಿಸಿ ಅವರ ಜೊತೆ ಲಿವಿಂಗ್ ಟು ಗೆದರ್ ನಲ್ಲಿದ್ದು ನಂತರ ಲೈಂಗಿಕ ಸಂಪರ್ಕ ಬೆಳೆಸಿ ವಿಡಿಯೋ ಸೆರೆ ಹಿಡಿದು ಮೋಸ ಮಾಡುತ್ತಿದ್ದನು.
