ಬೆಂಗಳೂರಿನಲ್ಲಿ ಗಮನ ಮನಸೆಳೆಯುತ್ತಿದೆ ವೈವಿಧ್ಯಮಯ ಮತ್ಸ್ಯಮೇಳ

ಬೆಂಗಳೂರು : ಹೆಬ್ಬಾಳದ ಪಶುವೈದ್ಯಕೀಯ ಮಹಾವಿದ್ಯಾಲಯ ಆವರಣದಲ್ಲಿ ಮೀನುಗಾರಿಕೆ ಇಲಾಖೆಯ ವತಿಯಿಂದ ಹಮ್ಮಿಕೊಂಡಿದ್ದ ವಿಶ್ವ ಮೀನುಗಾರಿಕೆ ದಿನಾಚರಣೆ ಹಾಗೂ ಮತ್ಸ್ಯಮೇಳ-2025 ಕಾರ್ಯಕ್ರಮದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಭಾಗಿಯಾಗಿದ್ದರು.

ಈ ಕುರಿತು ಮಾಹಿತಿ ನೀಡಿದ ಡಿಸಿಎಂ ಡಿಕೆ ಶಿವಕುಮಾರ್ ಮೀನುಗಾರಿಕೆಗೆ ಉತ್ತೇಜನ ನೀಡುವ ಸಲುವಾಗಿ ನಿನ್ನೆಯಿಂದ ಆಯೋಜಿಸಿರುವ ಮೂರು ದಿನಗಳ ಈ ಕಾರ್ಯಕ್ರಮವು ಹಲವು ವಿಶೇಷತೆಗಳಿಂದ ಕೂಡಿದೆ.

ಮೌಲ್ಯವರ್ಧಿತ ಮೀನಿನ ಉತ್ಪನ್ನಗಳ ತಯಾರಿ, ಮಾರಾಟ, ರಫ್ತು ಮಾಡುವ ಉದ್ದೇಶದಿಂದ ಜನರಿಗೆ ಮೀನಿನ ವಿಶೇಷ ತಿಂಡಿಗಳನ್ನು ಈ ಸಲದ ಮತ್ಸ್ಯಮೇಳದಲ್ಲಿ ಪರಿಚಯಿಸಲಾಗಿದೆ.ರಾಜ್ಯ ಮೀನುಗಾರಿಕೆ ಇಲಾಖೆಗೆ ಸಂಬಂಧಿಸಿದ ಮಳಿಗೆ ಹತ್ತು ಹಲವು ಮಾಹಿತಿಗಳನ್ನು ತಿಳಿಸಿಕೊಡುತ್ತಿದೆ. ಇಲ್ಲಿ ಯೋಜನೆಗಳು ಅನುಷ್ಠಾನಗೊಂಡಿರುವ ಬಗ್ಗೆಯೂ ವಿಸ್ತೃತ ಮಾಹಿತಿ ಸಿಗಲಿದ್ದು, ಜೊತೆಗೆ ಗಮನ ಸೆಳೆಯುವಂತಹ ಮೀನುಗಾರಿಕೆಯಲ್ಲಿ ಬಳಸುವ ಸಾಧನಗಳನ್ನು ಮಳಿಗೆಯಲ್ಲಿ ವೀಕ್ಷಿಸಬಹುದಾಗಿದೆ ಎಂದು ಮಾಹಿತಿ ನೀಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read