ನಾಲೆಗೆ ಹಾರಿ ಗುತ್ತಿಗೆದಾರ ಆತ್ಮಹತ್ಯೆ

ಮೈಸೂರು: ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಬಲದಂಡೆ ನಾಲೆಗೆ ಹಾರಿ ಲೋಕೋಪಯೋಗಿ ಇಲಾಖೆ ಗುತ್ತಿಗೆದಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೈಸೂರು ನಗರದ ಕುರುಬರಹಳ್ಳಿ ನಿವಾಸಿ ನಾಗೇಶ ರಾವ್ ಅವರ ಪುತ್ರ ಕಿರಣ್ ರಾವ್(40) ಆತ್ಮಹತ್ಯೆ ಮಾಡಿಕೊಂಡವರು. ಹಲವು ವರ್ಷಗಳಿಂದ ಗುತ್ತಿಗೆದಾರರಾಗಿ ಕಾರ್ಯ ನಿರ್ವಹಿಸುತ್ತಿದ್ದ ಕಿರಣ್ ರಾವ್ ನವೆಂಬರ್ 20ರಂದು ನಂಜನಗೂಡು ತಾಲೂಕಿನ ಹುರ ಗ್ರಾಮದಲ್ಲಿ ರಸ್ತೆ ಕಾಮಗಾರಿಯ ಮೇಲ್ವಿಚಾರಣೆ ನಡೆಸಿದ್ದರು. ನಂತರ ಹುಲ್ಲಹಳ್ಳಿ ಗ್ರಾಮದ ಬಳಿ ಕಬಿನಿ ಬಲದಂಡೆ ನಾಲೆಯ ಸಮೀಪ ತಮ್ಮ ಬೈಕ್ ಮತ್ತು ಹೆಲ್ಮೆಟ್ ಬಿಟ್ಟು ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಾಗಿದ್ದು, ನವೆಂಬರ್ 22 ರಂದು ಕಳಲೆ ಗ್ರಾಮದ ನಾಲೆಯಲ್ಲಿ ಕಿರಣ್ ರಾವ್ ಮೃತದೇಹ ಸಿಕ್ಕಿದ್ದು, ನಂಜನಗೂಡು ಗ್ರಾಮಾಂತರ ಪೊಲೀಸರು ಮರಣೋತ್ತರ ಪರೀಕ್ಷೆ ಬಳಿಕ ವಾರಸುದಾರರಿಗೆ ಶವ ಹಸ್ತಾಂತರಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read