BIG NEWS: ರಸ್ತೆಗುಂಡಿ ತಪ್ಪಿಸಲು ಹೋಗಿ ಕೆರೆಗೆ ಬಿದ್ದ ಲಾರಿ ಪ್ರಕರಣ: ನೀರಿನಲ್ಲಿ ಮುಳುಗಿ ಚಾಲಕ ಸಾವು

ಆನೇಕಲ್: ರಸ್ತೆಗುಂಡಿ ತಪ್ಪಿಸಲು ಹೋಗಿ ಜಲ್ಲಿ ಕಲ್ಲುತುಂಬಿದ್ದ ಲಾರಿ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಘಟನೆಯಲ್ಲಿ ನಾಪತ್ತೆಯಾಗಿದ್ದ ಲಾರಿ ಚಾಲಕ ಸಾವನ್ನಪ್ಪಿರುವುದು ದೃಢಪಟ್ಟಿದೆ.

ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಅತ್ತಿಬೆಲೆ-ಸರ್ಜಾಪುರ ರಸ್ತೆಯಲ್ಲಿ ಬಿದರಿಗುಪ್ಪೆ ಬಳಿ ಚಾಲಕನ ನಿಯಂತ್ರಣ ತಪ್ಪಿದ ಲಾರಿ ಕೆರೆಗೆ ಬಿದ್ದಿತ್ತು. ಘಟನೆಯಲ್ಲಿ ಲಾರಿ ಚಾಲಕ ನಾಪತ್ತೆಯಾಗಿದ್ದ. ಘಟನಾ ಸ್ಥಳಕ್ಕೆ ತೆರಳಿದ ಪೊಲೀಸರು ಕ್ರೇನ್ ಸಹಾಯದಿಂದ ಲಾರಿಯನ್ನು ಮೇಲಕೆತ್ತಿದ್ದಾರೆ. ಈ ವೇಳೆ ಲಾರಿ ಚಾಲನ ಶವ ಕೂಡ ಪತ್ತೆಯಾಗಿದೆ.

ಕಲಬುರಗಿ ಮೂಲದ ಲಾರಿ ಚಾಲಕ ಮಹೇಶ್ (37) ಮೃತ ದುರ್ದೈವಿ. ಅತ್ತಿಬೆಲೆಯ ಆಕ್ಸ್ ಫರ್ಡ್ ಆಸ್ಪತ್ರೆಗೆ ಮೃತದೇಹ ರವಾನಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read