ಕಲಬುರಗಿ: ಹಿರಿಯ ಐಎಎಸ್ ಅಧಿಕಾರಿ, ಖನಿಜ ನಿಗಮದ ಎಂಡಿ ಮಹಾಂತೇಶ್ ಬಿಳಗಿ ಪ್ರಯಾಣಿಸುತ್ತಿದ್ದ ಕಾರ್ ಅಪಘಾತಕ್ಕೀಡಾಗಿದೆ. ಅಪಘಾತದಲ್ಲಿ ಮಹಾಂತೇಶ್ ಬಿಳಗಿ ಸೇರಿ ಮೂವರು ಮೃತಪಟ್ಟಿದ್ದಾರೆ.
ಕಲಬುರಗಿ ಜಿಲ್ಲೆ ಜೇವರ್ಗಿ ಬೈಪಾಸ್ ಬಳಿ ಅವರು ಇನೋವಾ ಕಾರ್ ಅಪಘಾತಕ್ಕೀಡಾಗಿದೆ. ಮಹಾಂತೇಶ್ ಬಿಳಗಿ ಪ್ರಯಾಣಿಸುತ್ತಿದ್ದ ಕಾರ್ ನಲ್ಲಿದ್ದ ಐದು ಜನರ ಪೈಕಿ ಮೂವರು ಮೃತಪಟ್ಟಿದ್ದಾರೆ.
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಕಲಬುರಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಗಂಭೀರವಾಗಿ ಗಾಯಗೊಂಡಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ವಿಜಯಪುರದಿಂದ ಕಲಬುರಗಿಗೆ ಪ್ರಯಾಣಿಸುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ. ಐಎಎಸ್ ಅಧಿಕಾರಿಯ ಮಹಾಂತೇಶ್ ಬಿಳಗಿ ಸೇರಿದಂತೆ ಕಾರ್ ನಲ್ಲಿದ್ದ ಮೂವರು ಸಾವನ್ನಪ್ಪಿದ್ದಾರೆ. ಜೇವರ್ಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಬೆಳಗಾವಿ, ದಾವಣಗೆರೆಯಲ್ಲಿ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದ ಅವರು ಜನಾನುರಾಗಿಯಾಗಿದ್ದರು. ಬೆಸ್ಕಾಂ ಎಂಡಿಯಾಗಿ ಕಾರ್ಯ ನಿರ್ವಹಿಸಿದ್ದರು. ಖನಿಜ ನಿಗಮದ ಎಂಡಿಯಾಗಿದ್ದರು. ಸಂಬಂಧಿಕರ ಮದುವೆಗಾಗಿ ಕಲಬುರಗಿಗೆ ತೆರಳುತ್ತಿದ್ದಾಗ ಕಾರ್ ಅಪಘಾತಕ್ಕೀಡಾಗಿದೆ.
