BIG NEWS: ನಂದಿನಿ ತುಪ್ಪ ಕಲಬೆರಕೆ ಪ್ರಕರಣ: ದಂಪತಿ ಅರೆಸ್ಟ್

ಬೆಂಗಳೂರು: ನಂದಿನಿ ತುಪ್ಪ ಕಲಬೆರಕೆ ಪ್ರಕರಣದಲ್ಲಿ ಪ್ರಮುಖ ಆರೋಪಿಗಳಾದ ದಂಪತಿಯನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಶಿವಕುಮಾರ್ ಹಾಗೂ ರಮ್ಯಾ ಬಂಧಿತ ದಂಪತಿ. ಬೆಂಗಳೂರಿನ ನಂದಿನಿ ಪಾರ್ಲರ್ ಗಳಿಗೆ ಈ ದಂಪತಿ ನಕಲಿ ನಂದಿನಿ ತುಪ್ಪ ಸರಬರಾಜು ಮಾಡುತ್ತಿದ್ದರು. ತಮಿಳುನಾಡಿನಲ್ಲಿ ಘಟಕ ಹೊಂದಿದ್ದ ದಂಪತಿ ರಾಜ್ಯದಲ್ಲಿ ಕಲಬೆರಕೆ ತುಪ್ಪ ತಯಾರಿಸಿ, ಪ್ಯಾಕೆಟ್ ಹಾಗೂ ಪ್ಲಾಸ್ಟಿಕ್ ಬಾಟಲ್ ಗಳಲ್ಲಿ ಸಪ್ಲೈ ಮಾಡುತ್ತಿದ್ದರು.

ಈ ಹಿಂದೆ ಬಂಧಿತರಾಗಿದ ಡಿಸ್ಟ್ರಿಬ್ಯೂಟರ್ ಮಹೇಂದ್ರ ಹಾಗೂ ದೀಪಕ್ ಮಾಹಿತಿ ಮೇರೆಗೆ ದಾಳಿ ನಡೆಸಿದ ಸಿಸಿಬಿ ಪೊಲೀಸರು ಶಿವಕುಮಾರ್ ಹಾಗೂ ರಮ್ಯಾ ದಂಪತಿ ಬಂಧಿಸಿದ್ದು, ನಕಲಿ ತುಪ್ಪ ತಯಾರಿಸುವ ದೊಡ್ಡ ಅತ್ಯಾಧುನಿಕ ಯಂತ್ರವನ್ನೂ ವಶಕ್ಕೆ ಪಡೆದಿದ್ದಾರೆ.

ಅಲ್ಲದೇ 1.50 ಕೋಟಿ ಮೌಲ್ಯದ 8 ಸಾವಿರ ಲೀಟರ್ ನಕಲಿ ತುಪ್ಪ ಜಪ್ತಿ ಮಾಡಲಾಗಿದೆ. ಸದ್ಯ ಕಿಂಗ್ ಪಿನ್ ದಂಪತಿಯನ್ನು ವಿಚಾರಣೆಗೊಳಪಡಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read