BREAKING : ಉಡುಪಿ ಶ್ರೀ ಕೃಷ್ಣಮಠದಲ್ಲಿ ‘ಲಕ್ಷಕಂಠ ಗೀತಾ ಪಾರಾಯಣ’ : ಪ್ರಧಾನಿ ಮೋದಿ ಭಾಗಿ |WATCH VIDEO

ಉಡುಪಿ : ಉಡುಪಿ ಶ್ರೀ ಕೃಷ್ಣಮಠಕ್ಕೆ ಪ್ರಧಾನಿ ಮೋದಿ ಭೇಟಿ ನೀಡಿದ್ದು, ದೇವರ ದರ್ಶನ ಪಡೆದ ನಂತರ ಅವರು ಲಕ್ಷ ಕಂಠ ಗೀತಾ ಪಾರಾಯಣದಲ್ಲಿ ಭಾಗಿಯಾಗಿದ್ದಾರೆ.

ಶ್ರೀ ಕೃಷ್ಣ ಮಠಕ್ಕೆ ಆಗಮಿಸಿದ ಪ್ರಧಾನಿ ಮೋದಿ ಶ್ರೀ ಕೃಷ್ಣನ ದರ್ಶನ ಪಡೆದಿದ್ದಾರೆ. ನಂತರ ಸ್ವರ್ಣ ಲೇಪಿತ ಕನಕನ ಕಿಂಡಿ ಲೋಕಾರ್ಪಣೆಗೊಳಿಸಿದ್ದಾರೆ. ಬರೋಬ್ಬರಿ 2 ಕೋಟಿ ರೂ ವೆಚ್ಚದಲ್ಲಿ ಸ್ವರ್ಣ ಲೇಪಿತ ಕನಕನ ಕಿಂಡಿಯನ್ನ ನಿರ್ಮಿಸಲಾಗಿದೆ.ಉಡುಪಿಯ ಕೃಷ್ಣ ಮಂಟಪದಲ್ಲಿ ಕನಕನ ಕಿಂಡಿಗೆ ಚಿನ್ನದ ಹೊದಿಕೆ ಸಮರ್ಪಿಸಿ ಸುವರ್ಣ ತೀರ್ಥ ಮಂಟಪ ಉದ್ಘಾಟಿಸಿದ್ದಾರೆ. ನಂತರ ಅವರು ಲಕ್ಷ ಕಂಠ ಗೀತಾ ಪಾರಾಯಣದಲ್ಲಿ ಭಾಗಿಯಾಗಿದ್ದಾರೆ.

ಉಡುಪಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿಯವರನ್ನು ಸಚಿವ ದಿನೇಶ್ ಗುಂಡೂರಾವ್ ಆತ್ಮೀಯವಾಗಿ ಸ್ವಾಗತಿಸಿದರು. ಬಳಿಕ ಆದಿ ಉಡುಪಿಯಿಂದ ಪ್ರಧಾನಿ ಮೋದಿ ರೋಡ್ ಶೋ ಆರಂಭವಾಗಿದ್ದು, ಸಿಟಿ ಬಸ್ ನಿಲ್ದಾಣ ಮಾರ್ಗವಾಗಿ ರೋಡ್ ಶೋ ನಡೆದಿದೆ. ರಸ್ತೆಯ ಇಕ್ಕೆಲಗಳಲ್ಲಿ ನೆರೆದಿರುವ ಜನರು ಮೋದಿ ಮೋದಿ ಎಂದು ಜಯಘೋಷಗಳನ್ನು ಕೂಗಿ ಪ್ರಧಾನಿ ಮೇಲೆ ಹೂಮಳೆಗರೆದು ಸ್ವಾಗತಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read