ರಾಯಚೂರು: ರಸ್ತೆ ಬದಿ ನಿಂತಿದ್ದ ತಂದೆ ಹಾಗೂ ಮಗನಿಗೆ ಲಾರಿ ಡಿಕ್ಕಿ ಹೊಡೆದು ಅವರ ಮೇಲೆಯೇ ಹರಿದು ಹೋಗ್ಗಿದ್ದು, ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.
ರಾಯಚೂರು ಹೊರವಲಯದಲ್ಲಿ ಈ ದುರಂತ ಸಂಭವಿಸಿದೆ. ತಂದೆ ನಾಗಪ್ಪ ಹಾಗೂ ಮಗ ರಮೇಶ್ (36) ಮೃತ ದುರ್ದೈವಿಗಳು. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
