SHOCKING : ರಾಜ್ಯದಲ್ಲಿ ಮತ್ತೊಂದು ‘ಪೈಶಾಚಿಕ ಕೃತ್ಯ’ : ಅಪ್ರಾಪ್ತ ಬಾಲಕಿಯನ್ನ ಕಬ್ಬಿನ ಗದ್ದೆಗೆ ಎಳೆದೊಯ್ದು ಗ್ಯಾಂಗ್ ರೇಪ್.!

ಬೆಳಗಾವಿ : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಅಪ್ರಾಪ್ತ ಬಾಲಕಿಯನ್ನ ಕಬ್ಬಿನ ಗದ್ದೆಗೆ ಎಳೆದೊಯ್ದು ಗ್ಯಾಂಗ್ ರೇಪ್ ಎಸಗಿದ ಘಟನೆ ಬೆಳಗಾವಿ ಜಿಲ್ಲೆಯ ಮುರಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ನ.23 ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಬಳಿಕ ಆರೋಪಿಗಳು ಬಾಲಕಿ ಕುಟುಂಬಸ್ಥರಿಗೆ ಜೀವ ಬೆದರಿಕೆಯೊಡ್ಡಿದ್ದರು. ಆದರೆ ಅವರು ದೂರು ಕೊಡಲು ಹಿಂದೇಟು ಹಾಕಿದ್ದರು ಎನ್ನಲಾಗಿದೆ.

ಮಣಿಕಂಠ ದಿನ್ನಿಮನಿ ಮತ್ತು ಈರಣ್ಣ ಸಂಕಮ್ಮನವರ ಈ ಕೃತ್ಯ ಎಸಗಿದ ಪಾಪಿಗಳು. ಹಿಟ್ಟು ಮಾಡಿಸಿಕೊಂಡು ಬರಲು ಹಿಟ್ಟಿನ ಗಿರಣಿಗೆ ಹೋಗಿದ್ದ ವೇಲೆ ಆಕೆಯನ್ನ ಕಬ್ಬಿನ ಗದ್ದೆಗೆ ಎಳೆದೊಯ್ದು ಅತ್ಯಾಚಾರ ನಡೆಸಲಾಗಿದೆ. ಮುರಗೋಡ ಠಾಣೆ ಪೊಲೀಸರು ಕೇಸ್ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read