ಗಮನಿಸಿ : ಡಿ.15 ರಂದು EPFO ಪಿಂಚಣಿ ಅದಾಲತ್

ಬಳ್ಳಾರಿ : ಕಾರ್ಮಿಕರ ಭವಿಷ್ಯ ನಿಧಿ ಸಂಸ್ಥೆಯ ಬಳ್ಳಾರಿ ಪ್ರಾದೇಶಿಕ ಕಚೇರಿ ವತಿಯಿಂದ ಪಿಂಚಣಿದಾರರ ಕುಂದು ಕೊರತೆ ಆಲಿಸಿ, ಪರಿಹರಿಸಲು ಡಿಸೆಂಬರ್ 15 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 01 ಗಂಟೆಯವರೆಗೆ ನಗರದ ಪ್ರಾದೇಶಿಕ ಕಚೇರಿಯಲ್ಲಿ ಪಿಂಚಣಿ ಅದಾಲತ್ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಜಿಲ್ಲಾ ಪ್ರಾದೇಶಿಕ ಕಚೇರಿಯ ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತ ಕೆ.ವಿ ಪ್ರವೀಣ್ ಅವರು ತಿಳಿಸಿದ್ದಾರೆ.

ಬಳ್ಳಾರಿ, ವಿಜಯನಗರ, ಕೊಪ್ಪಳ, ಚಿತ್ರದುರ್ಗ ಜಿಲ್ಲೆಗಳ ಪಿಂಚಣಿದಾರರು ತಮ್ಮ ಕುಂದುಕೊರತೆಗಳಿದ್ದಲ್ಲಿ ಬಳ್ಳಾರಿ ಪ್ರಾದೇಶಿಕ ಕಚೇರಿಯ ಸಾರ್ವಜನಿಕ ಸಂಪರ್ಕ ಅಧಿಕಾರಿಗೆ ಪತ್ರ ಅಥವಾ ಇ-ಮೇಲ್ ಮೂಲಕ ಪಿ.ಪಿ.ಒ ಸಂಖ್ಯೆ, ವಿಳಾಸ, ದೂರವಾಣಿ, ಮೊಬೈಲ್ ಸಂಖ್ಯೆ ಮತ್ತು ಕುಂದು ಕೊರತೆಯ ಸ್ವರೂಪ ಹಾಗೂ ಇತ್ಯಾದಿಗಳನ್ನು ಅಂಚೆ ಪತ್ರದ ಮೂಲಕ ಡಿಸೆಂಬರ್ 10 ರೊಳಗಾಗಿ ತಿಳಿಸಬಹುದು. ಪತ್ರ ಲಕೋಟೆ ಮೇಲೆ ಪಿಂಚಣಿ ಅದಾಲತ್ ಎಂದು ಬರೆಯಬೇಕು. ಹೆಚ್ಚಿನ ಮಾಹಿತಿಗಾಗಿ ದೂ.08392-268943 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read