SHOCKING : ರಾಜ್ಯದಲ್ಲಿ ಮತ್ತೊಂದು ‘ಪೈಶಾಚಿಕ ಕೃತ್ಯ’ : ಇಬ್ಬರು ಹೆಣ್ಣು ಮಕ್ಕಳ ಮೇಲೆ ಪಾಪಿ ತಂದೆಯಿಂದಲೇ ಅತ್ಯಾಚಾರ.!

ಚಿತ್ರದುರ್ಗ : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಇಬ್ಬರು ಹೆಣ್ಣು ಮಕ್ಕಳ ಮೇಲೆಯೇ ಪಾಪಿ ತಂದೆ ಅತ್ಯಾಚಾರ ಎಸಗಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.

ಮದ್ಯದ ಅಮಲಿನಲ್ಲಿ ತನ್ನ ಹೆಣ್ಣು ಮಕ್ಕಳ ಮೇಲೆ ಎರಗಿ ನೀಚ ತಂದೆ ವಿಕೃತಿ ಮೆರೆದಿದ್ದಾನೆ. ಗಣಿ ಕೆಲಸ ಮಾಡಿಕೊಂಡಿದ್ದ ಮಂಜುನಾಥ್ ಎಂಬಾತ ತನ್ನ 13 ಹಾಗೂ 10 ವರ್ಷದ ಅಪ್ರಾಪ್ತ ಪುತ್ರಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಕುಡಿತಕ್ಕೆ ದಾಸನಾಗಿದ್ದ ಮಂಜುನಾಥ್ ತನ್ನ ಮೇಲೂ ಅತ್ಯಾಚಾರ ಎಸಗಲು ಮುಂದಾಗಿದ್ದ ಆರೋಪಿ ತಾಯಿ ಕೂಡ ಆರೋಪ ಮಾಡಿದ್ದಾರೆ.

ಆರೋಪಿ ಮಂಜುನಾಥ್ ಮಾಡಿರುವ ಕೆಲಸಕ್ಕೆ ಊರಿಗೆ ಕೆಟ್ಟ ಹೆಸರು ಬಂದಿದೆ. ಆತನಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ಸದ್ಯ ಆರೋಪಿಯನ್ನ ಪೊಲೀಸರು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read