ಉಡುಪಿ: ಆಂಧ್ರಪ್ರದೇಶ ಉಪ ಮುಖ್ಯಮಂತ್ರಿ ಮತ್ತು ಖ್ಯಾತ ನಟ ಪವನ್ ಕಲ್ಯಾಣ್ ಭಾನುವಾರ ಉಡುಪಿಗೆ ಆಗಮಿಸಲಿದ್ದಾರೆ.
ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರ ತೀರ್ಥರು ಆಯೋಜಿಸಿರುವ ಲಕ್ಷ ಕಂಠ ಗೀತ ಪಾರಾಯಣ ಕಾರ್ಯಕ್ರಮದ ಸಮಾರೋಪದಲ್ಲಿ ಪವನ್ ಕಲ್ಯಾಣ್ ಭಾಗವಹಿಸಲಿದ್ದಾರೆ. ಮಧ್ಯಾಹ್ನ 3:30ಕ್ಕೆ ಉಡುಪಿಗೆ ಆಗಮಿಸಲಿರುವ ಪವನ್ ಕಲ್ಯಾಣ್ ಶ್ರೀ ಕೃಷ್ಣನ ದರ್ಶನ ಪಡೆಯಲಿದ್ದಾರೆ. ನಂತರ ರಾಜಾಂಗಣದಲ್ಲಿ ನಡೆಯಲಿರುವ ಲಕ್ಷ ಕಂಠ ಗೀತ ಪಾರಾಯಣ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.
