BREAKING: ಪ್ರಿ ವೆಡ್ಡಿಂಗ್ ಶೂಟ್ ಮುಗಿಸಿ ಬರುವಾಗಲೇ ಅಪಘಾತ: ಭಾವಿ ದಂಪತಿ ಸಾವು

ಕೊಪ್ಪಳ: ಪ್ರಿ ವೆಡ್ಡಿಂಗ್ ಫೋಟೋ ಶೂಟ್ ಮುಗಿಸಿ ಬರುವಾಗ ಸಂಭವಿಸಿದ ಅಪಘಾತದಲ್ಲಿ ಭಾವಿ ದಂಪತಿ ಮೃತಪಟ್ಟಿದ್ದಾರೆ.

ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಚಿಕ್ಕಬಣಕಲ್ ಗ್ರಾಮದ ಬಳಿ ಅಪಘಾತ ಸಂಭವಿಸಿದ್ದು, ಕೊಪ್ಪಳ ತಾಲೂಕಿನ ಇರಕಲ್ಲಗಢ ಗ್ರಾಮದ ಕರಿಯಪ್ಪ ಮಡಿವಾಳ(26), ಕಾರಟಗಿ ತಾಲೂಕಿನ ಮುಸ್ಟೂರು ಗ್ರಾಮದ ಕವಿತಾ(19) ಮೃತಪಟ್ಟಿದ್ದಾರೆ. ಇವರ ಮದುವೆ ಡಿಸೆಂಬರ್ 21ರಂದು ನಿಗದಿಯಾಗಿತ್ತು.

ಬೈಕ್ ಮತ್ತು ಲಾರಿಯ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ಇಬ್ಬರೂ ಮೃತಪಟ್ಟಿದ್ದಾರೆ. ಮದುವೆ ಸಿದ್ಧತೆಯಲ್ಲಿದ್ದ ಇವರು ಪ್ರಿ ವೆಡ್ಡಿಂಗ್ ಶೂಟ್ ಮಾಡಿಸಲು ತೆರಳಿದ್ದರು.

ಐದು ತಿಂಗಳ ಹಿಂದೆ ನಿಶ್ಚಿತಾರ್ಥ ನೆರವೇರಿತ್ತು. ಮುನಿರಾಬಾದ್ ಸುತ್ತಮುತ್ತ ಫೋಟೋ ಮತ್ತು ವಿಡಿಯೋ ತೆಗೆಸಿಕೊಂಡು ಸಂಭ್ರಮಿಸಿದ್ದರು. ಮದುವೆ ಪೂರ್ವಭಾವಿಯಾಗಿ ಶೂಟಿಂಗ್ ಮುಗಿಸಿ ಗಂಗಾವತಿ ಮಾರ್ಗವಾಗಿ ಮುಸ್ಟೂರು ಗ್ರಾಮಕ್ಕೆ ವಾಪಸ್ ಬರುವಾಗ ಅಪಘಾತ ಸಂಭವಿಸಿದೆ. ಗಂಗಾವತಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read