BIG NEWS : ರಾಜ್ಯದ ಕ್ರೀಡಾಪಟುಗಳಿಗೆ ಗುಡ್ ನ್ಯೂಸ್ : ಸರ್ಕಾರದಿಂದ ಸಿಗಲಿದೆ ಈ ಸೌಲಭ್ಯಗಳು, ಇಲ್ಲಿದೆ ಮಾಹಿತಿ

ಬೆಂಗಳೂರು :  ರಾಜ್ಯದ ಕ್ರೀಡಾಪಟುಗಳಿಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಲವು ಯೋಜನೆ  ಸೌಲಭ್ಯಗಳನ್ನ ಜಾರಿಗೆ ತಂದಿದೆ.ಈ ಕುರಿತು ಇಲ್ಲಿದೆ ಮಾಹಿತಿ.

1. ಕ್ರೀಡಾ ವಸತಿ ಶಾಲೆ/ನಿಲಯ:

ರಾಜ್ಯದಾದ್ಯಂತ 32 ಕ್ರೀಡಾ ವಸತಿ ನಿಲಯ ಹಾಗೂ 02 ಕ್ರೀಡಾ ವಸತಿ ಶಾಲೆಗಳಿದ್ದು, ವೈಜ್ಞಾನಿಕ ಕ್ರೀಡಾ ತರಬೇತಿ, ಉಚಿತ ಊಟೋಪಹಾರ, ವಸತಿ ಮತ್ತು ಕ್ರೀಡಾ ಸಮವಸ್ತ್ರ ಒದಗಿಸಲಾಗುತ್ತಿದೆ.

2. ‘ಗುರಿ: ಒಲಿಂಪಿಕ್ ಪದಕ’ ಯೋಜನೆ

ರಾಜ್ಯದ ಅತ್ಯಂತ ಪ್ರತಿಭಾನ್ವಿತ 60 ಕ್ರೀಡಾಪಟುಗಳನ್ನು ಗುರುತಿಸಿ, 2028ರ ಒಲಿಂಪಿಕ್ಸ್ ತಯಾರಿಗೆ ವಾರ್ಷಿಕ ತಲಾ ರೂ.10.00ಲಕ್ಷ ಪ್ರೋತ್ಸಾಹ ಧನ ನೀಡಲಾಗುವುದು.

3) ಕ್ರೀಡಾ ಶ್ರೀ ಸಾಧಕರಿಗೆ ನಗದು ಪುರಸ್ಕಾರ:

ರಾಷ್ಟ್ರೀಯ ಮತ್ತು ಅಂತರ-ರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಕ್ರೀಡಾಪಟುಗಳಿಗೆ ಕೆಳಕಾಣಿಸಿದಂತೆ ನಗದು ಪುರಸ್ಕಾರವನ್ನು ನೀಡಲಾಗುತ್ತಿದೆ.

ಪರಿಶಿಷ್ಟ ಜಾತಿ ಮತ್ತು ಪಂಗಡದ ಸಾಧಕ ಕ್ರೀಡಾಪಟುಗಳಿಗೆ ವಿಶೇಷ ನಗದು ಪುರಸ್ಕಾರ:

ಅಂತಾರಾಷ್ಟ್ರೀಯ ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಕ್ರೀಡಾಕೂಟಗಳ ಪದಕ ವಿಜೇತರಿಗೆ ವಿಶೇಷ ನಗದು ಪುರಸ್ಕಾರ ನೀಡಲಾಗುತ್ತಿದೆ.

5. ಕ್ರೀಡಾ ವಿದ್ಯಾರ್ಥಿ ವೇತನ:

ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಪದಕ ವಿಜೇತರಾದ ಹಾಗೂ ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ರೂ 10,000 ವಿದ್ಯಾರ್ಥಿ ವೇತನ ನೀಡಿ ಪ್ರೋತ್ಸಾಹಿಸಲಾಗುತ್ತಿದೆ.

6. ಶೈಕ್ಷಣಿಕ ಶುಲ್ಕ ಮರುಪಾವತಿ:

ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದಿಂದ ಪ್ರತಿನಿಧಿಸಿ ಸಾಧನೆ ಮಾಡಿದ ಕ್ರೀಡಾಪಟುಗಳಿಗೆ ವಾರ್ಷಿಕ ಗರಿಷ್ಟ ರೂ.50,000/- ವರೆಗೆ ಶೈಕ್ಷಣಿಕ ಶುಲ್ಕ ಮರುಪಾವತಿ ಮಾಡಲಾಗುತ್ತಿದೆ.

7. ಕ್ರೀಡಾ ಪ್ರಶಸ್ತಿಗಳು:

ಏಕಲವ್ಯ ಪ್ರಶಸ್ತಿ: ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ

ರಾಜ್ಯವನ್ನು ಪ್ರತಿನಿಧಿಸಿ ಸಾಧನೆ ಮಾಡಿದ 15 ಕ್ರೀಡಾಪಟುಗಳಿಗೆ ಪ್ರತಿ ವರ್ಷ ತಲಾ ರೂ.4.00 ಲಕ್ಷ ನಗದು ಪುರಸ್ಕಾರ ಒಳಗೊಂಡ ರಾಜ್ಯದ ಅತ್ಯುನ್ನತ ಕ್ರೀಡಾ ಪ್ರಶಸ್ತಿಯಾದ ಏಕಲವ್ಯ ಪ್ರಶಸ್ತಿ ನೀಡಲಾಗುತ್ತಿದೆ.

ಜೀವಮಾನ ಸಾಧನೆ ಪ್ರಶಸ್ತಿ: ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದ

ಕ್ರೀಡಾಪಟುಗಳಿಗೆ ತರಬೇತಿ ನೀಡಿದ ರಾಜ್ಯದ ತರಬೇತುದಾರರಿಗೆ ತಲಾ ರೂ 3.00 ಲಕ್ಷ ನಗದು ಪುರಸ್ಕಾರ ಒಳಗೊಂಡ ಜೀವಮಾನ ಸಾಧನೆ ಪ್ರಶಸ್ತಿಯನ್ನು ಪ್ರತಿ ವರ್ಷ ನೀಡಲಾಗುತ್ತಿದೆ.

ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿ:- ಗ್ರಾಮೀಣ ಮತ್ತು ಪಾರಂಪರಿಕ ಕ್ರೀಡೆಗಳಲ್ಲಿ

ವಿಶೇಷ ಸಾಧನೆ ಮಾಡಿದ ರಾಜ್ಯದ ಗ್ರಾಮೀಣ ಕ್ರೀಡಾಪಟುಗಳಿಗೆ ತಲಾ ರೂ 2.00 ಲಕ್ಷ ನಗದು ಪುರಸ್ಕಾರ ಒಳಗೊಂಡ ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.

ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿ: ಕ್ರೀಡೆಯ ಅಭಿವೃದ್ಧಿಗೆ ಗಣನೀಯ

ಕೊಡುಗೆ ನೀಡಿದ ಖಾಸಗಿ ಸಂಘ-ಸಂಸ್ಥೆಗಳಿಗೆ ಉತ್ತೇಜನ ನೀಡಲು ತಲಾ ರೂ 10.00 ಲಕ್ಷ ನಗದು ಪುರಸ್ಕಾರ ಒಳಗೊಂಡ ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿಯನ್ನು ಪ್ರತಿ ವರ್ಷ ನೀಡಲಾಗುತ್ತಿದೆ.

8. ನಮ್ಮೂರ ಶಾಲೆಗೆ ನಮ್ಮ ಯುವಜನರು:

ಅಧಿಕೃತ ಕ್ರೀಡಾಕೂಟಗಳಲ್ಲಿ ಉತ್ತಮ ಸಾಧನೆ ತೋರುವ ಕ್ರೀಡಾಪಟುಗಳನ್ನು ರೂಪಿಸುವ ಸರ್ಕಾರಿ ಶಾಲೆಗಳನ್ನು ಪ್ರತಿ ಜಿಲ್ಲೆಗೆ ಒಂದರಂತೆ ಗುರುತಿಸಿ ಆಯ್ಕೆಯಾದ ಶಾಲೆಗೆ ಪ್ರೋತ್ಸಾಹವಾಗಿ ತಲಾ ರೂ.1.00ಲಕ್ಷದಂತೆ ಸರ್ಕಾರದಿಂದ ಪ್ರೋತ್ಸಾಹಧನವನ್ನು ನೀಡಲಾಗುವುದು.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read