ಇಲ್ಲಿದೆ ಚಳಿಗಾಲದಲ್ಲಿ ಚರ್ಮ ರಕ್ಷಣೆಗೆ ಮನೆ ಮದ್ದು

ಚಳಿಗಾಲದಲ್ಲಿ ಚರ್ಮ ಬೇಗನೆ ಕಾಂತಿ ಕಳೆದುಕೊಳ್ಳುತ್ತದೆ. ಇದಕ್ಕಾಗಿ ಮನೆಯಲ್ಲಿಯೇ ಹಲವಾರು ಕ್ರಮ ಕೈಗೊಳ್ಳಬಹುದು. ಅದು ಹೇಗೆ ಅಂತ ನೀವು ತಿಳಿಯಿರಿ.

ಕಡಲೆಹಿಟ್ಟು ಹಾಗೂ ಅರಿಶಿಣ

ಒಣ ಚರ್ಮವಾಗಿದ್ದಲ್ಲಿ ಈ ಲೇಪನದಲ್ಲಿ ಕೆನೆ, ಮೊಸರು ಬಳಸಬಹುದು. ಇಲ್ಲದಿದ್ದಲ್ಲಿ ನಿಂಬೆ ರಸ ಅಥವಾ ತಿಳಿಮಜ್ಜಿಗೆ ನೀರು ಬೆರೆಸಿ ಲೇಪನ ಮಾಡಿಕೊಳ್ಳಬೇಕು.

 ಈ ಲೇಪನವನ್ನು ಮುಖ, ಕೈ-ಕಾಲುಗಳಿಗೆ ಲೇಪಿಸಿಕೊಂಡು, ಒಣಗಿದಂತೆ ಅನಿಸಿದಾಗ ಉಗುರು ಬೆಚ್ಚಗಿನ ನೀರನ್ನು ಬಳಸಿ ತೊಳೆದುಕೊಳ್ಳಬೇಕು.

ಲೋಳೆಸರ

ಯಾವ ಬಗೆಯ ಚರ್ಮದವರೂ ಧಾರಾಳವಾಗಿ ಇದನ್ನು ಬಳಸಬಹುದು. ಬಟ್ಟಲೊಂದಕ್ಕೆ ಲೋಳೆ ಸರದ ತಿರುಳನ್ನು ತೆಗೆದುಕೊಂಡು, ನಿಂಬೆ ರಸ ಹಾಗೂ ಅರಿಶಿಣವನ್ನು ಬೆರೆಸಿ, ಜೆಲ್‌ನಂತೆ ಇದನ್ನು ಮುಖಕ್ಕೆ, ಮೊಣಕೈ ತುದಿಗಳಿಗೆ ಲೇಪಿಸಿ, ಹದಿನೈದು ನಿಮಿಷಗಳ ನಂತರ ತೊಳೆದುಕೊಳ್ಳಿ.

ಆಲೂಗಡ್ಡೆ

ಇದು ಚರ್ಮವನ್ನು ಸ್ವಚ್ಛಗೊಳಿಸಿ, ಕೋಮಲಾಂಶ ನೀಡುತ್ತದೆ. ಆಲೂಗಡ್ಡೆಯನ್ನು ತುರಿದುಕೊಂಡು, ಆ ತುರಿಯನ್ನು ಮುಖಕ್ಕೆ ಉಜ್ಜಿಕೊಳ್ಳಬೇಕು. ಅದರ ನಂತರ ಐಸ್‌ ಕ್ಯುಬ್‌ ಅನ್ನು ಮುಖದ ತುಂಬಾ ಆಡಿಸಿಕೊಂಡರೆ ನುಣುಪು ನಿಮ್ಮ ಅನುಭವಕ್ಕೆ ಬರುತ್ತದೆ.

ಪಪ್ಪಾಯ

ಅತಿ ಹಣ್ಣಾಗಿ ಕಳೆತ ಪಪ್ಪಾಯದ ತಿರುಳನ್ನು ಅಂಗೈಯಲ್ಲಿ ಹಿಸುಕಿಕೊಳ್ಳಿ. ಒಣಚರ್ಮವಾದರೆ ಕೆನೆ, ಎಣ್ಣೆ ಚರ್ಮವಾದರೆ ನಿಂಬೆರಸ ಬೆರೆಸಿ, ಪೇಸ್ಟ್‌ ಮಾಡಿಕೊಳ್ಳಿ. ಈ ಲೇಪನವನ್ನು ಮುಖ, ಕತ್ತು, ಕೈಗಳಿಗೆ ಲೇಪಿಸಿಕೊಳ್ಳಿ. ಕಾಲು ಗಂಟೆಯ ನಂತರ ಚರ್ಮ ಬಿಗಿದುಕೊಂಡಂತೆ ಎನಿಸತೊಡಗುತ್ತದೆ. ಆಗ ಉಗುರು ಬಿಸಿ ನೀರಿನಿಂದ ಇದನ್ನು ತೊಳೆದುಕೊಳ್ಳಿ.

 ಕೊಬ್ಬರಿ ಎಣ್ಣೆ

ಸ್ನಾನದ ಮೊದಲು ಕೊಬ್ಬರಿ ಎಣ್ಣೆ ಹಚ್ಚಿಕೊಂಡು ಉಗುರು ಬಿಸಿ ನೀರಿನಿಂದ ಸ್ನಾನ ಮಾಡಿದರೆ ನೈಸರ್ಗಿಕ ಮಾಯಿಶ್ಚರೈಸರ್‌ ನೀಡಿದಂತೆ ಆಗುತ್ತದೆ. ಸ್ನಾನಕ್ಕೆ ಮೊದಲು ಕೊಬ್ಬರಿ ಎಣ್ಣೆ ಹಚ್ಚಿಕೊಳ್ಳಲು ಆಗದಿದ್ದರೆ ಸ್ನಾನದ ಕೊನೆಯಲ್ಲಿ ಒಂದು ಲೋಟ ನೀರಿಗೆ ಒಂದಷ್ಟು ತೆಂಗಿನೆಣ್ಣೆಯ ಹನಿಗಳನ್ನು ಸೇರ್ಪಡೆಗೊಳಿಸಿ, ಅವನ್ನು ಕೈ, ಕಾಲು, ಬೆನ್ನು, ಹೊಟ್ಟೆಗೆ ಹಚ್ಚಿಕೊಂಡರೆ ಚಳಿಗಾಲದ ತುರಿಕೆ ಹಾಗೂ ಕೆರೆತವನ್ನು ಕಡಿಮೆ ಮಾಡಬಹುದು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read