ಬೆಂಗಳೂರು: ಲಾಕ್ ಡೌನ್ ಸಂದರ್ಭದಲ್ಲಿ ಸಂಕಷ್ಟದಲ್ಲಿರುವ ಆಟೋ ಚಾಲಕರಿಗೆ ಸರ್ಕಾರದ ವತಿಯಿಂದ 5 ಸಾವಿರ ರೂಪಾಯಿ ಸಹಾಯಧನ ನೀಡಲಾಗುವುದು. ಸಹಾಯಧನ ಪಡೆಯಲು ಆಟೋ ಚಾಲಕರಿಗೆ ಇದ್ದ ಷರತ್ತುಗಳನ್ನು ಸಡಿಲಗೊಳಿಸಲಾಗಿದೆ.
ರಾಜ್ಯ ಸರ್ಕಾರದ 5 ಸಾವಿರ ರೂಪಾಯಿ ಸಹಾಯಧನ ಪಡೆಯಲು ಆಟೋ ಚಾಲಕರು ಸೇವಾಸಿಂಧು ವೆಬ್ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬೇಕಿದೆ. ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಬ್ಯಾಡ್ಜ್ ಹೊಂದಿರುವುದು ಕಡ್ಡಾಯ ಎಂದು ಹೇಳಲಾಗಿತ್ತು.
ಆದರೆ ಷರತ್ತುಗಳನ್ನು ಸಡಿಲಗೊಳಿಸಲಾಗಿದ್ದು, ಚಾಲನಾ ಪರವಾನಿಗೆ ಇದ್ದರೆ ಸಹಾಯಧನ ನೀಡಬಹುದು ಎಂದು ತಿಳಿಸಲಾಗಿದೆ. ಸಹಾಯಧಾನ ಪಡೆಯುವ ಆಟೋ ಚಾಲಕರಿಗೆ ಆಧಾರ್, ಪಾನ್ ಕಾರ್ಡ್ ಅನ್ನು ಕಡ್ಡಾಯಗೊಳಿಸಲಾಗಿದೆ. ಅರ್ಜಿ ಸಲ್ಲಿಸಿದ ಆಟೋ ಚಾಲಕರ ಬ್ಯಾಂಕ್ ಖಾತೆಗೆ ಹಣ ಜಮಾ ಮಾಡಲಾಗುವುದು ಎನ್ನಲಾಗಿದೆ.