alex Certify ಗೆಳೆಯ SPB ಚೇತರಿಕೆಗೆ ಹಾರೈಸಿ ಭಾವುಕ ನುಡಿಗಳನ್ನಾಡಿದ ಇಳಯರಾಜ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗೆಳೆಯ SPB ಚೇತರಿಕೆಗೆ ಹಾರೈಸಿ ಭಾವುಕ ನುಡಿಗಳನ್ನಾಡಿದ ಇಳಯರಾಜ

ಖ್ಯಾತ ಹಿನ್ನೆಲೆ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಕೊರೊನಾ ಸೋಂಕಿಗೊಳಗಾಗಿದ್ದು, ಗಂಭೀರ ಪರಿಸ್ಥಿತಿಯಲ್ಲಿರುವ ಅವರನ್ನು ಚೆನ್ನೈನ ಎಂಜಿಎಂ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಇರಿಸಿ ತಜ್ಞ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಬಾಲಸುಬ್ರಹ್ಮಣ್ಯಂ ಅವರಿಗೆ ವೆಂಟಿಲೇಟರ್ ನೆರವು ಮುಂದುವರಿಸಲಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಜ್ವರ ಮತ್ತು ನೆಗಡಿಯಿಂದ ಬಳಲುತ್ತಿದ್ದ ಎಸ್.ಪಿ. ಬಾಲಸುಬ್ರಹ್ಮಣ್ಯಂ ಆಗಸ್ಟ್ 5ರಂದು ತಮಗೆ ಕೊರೊನಾ ಸೋಂಕು ತಗುಲಿರುವುದು ದೃಡ ಪಡುತ್ತಿದ್ದಂತೆ ಚೆನ್ನೈನ ಆಸ್ಪತ್ರೆಗೆ ಹೋಗಿ ದಾಖಲಾಗಿದ್ದರು. ಆದರೆ ಆ ಬಳಿಕ ಅವರ ಆರೋಗ್ಯ ಪರಿಸ್ಥಿತಿ ವಿಷಮಿಸಿದ ಪರಿಣಾಮ ತೀವ್ರ ನಿಗಾ ಘಟಕಕ್ಕೆ ವರ್ಗಾಯಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯಕ್ಕೆ ಪ್ರಾರ್ಥಿಸಿ ಅವರ ಗೆಳೆಯ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ ಭಾವುಕ ನುಡಿಗಳನ್ನಾಡಿದ್ದಾರೆ. “ಬಾಲು ಆದಷ್ಟು ಬೇಗ ಗುಣಮುಖನಾಗಿ ಬಾ. ನಿನಗಾಗಿ ಕಾಯುತ್ತಿದ್ದೇನೆ” ಎಂದು ಇಳಯರಾಜ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...