alex Certify ತುಪ್ಪ ಸವರುವುದನ್ನು ಕೈಬಿಡಿ, ಒಳಮೀಸಲಾತಿ ಜಾರಿ ಮಾಡಿ: HDK ಆಗ್ರಹ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತುಪ್ಪ ಸವರುವುದನ್ನು ಕೈಬಿಡಿ, ಒಳಮೀಸಲಾತಿ ಜಾರಿ ಮಾಡಿ: HDK ಆಗ್ರಹ

ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಜಾರಿಗೊಳಿಸುವ ಬಗ್ಗೆ ರಾಜ್ಯ ಸರ್ಕಾರ ತನ್ನ ನಿಲುವು ಸ್ಪಷ್ಟಪಡಿಸಬೇಕು. ಒಳ ಮೀಸಲಾತಿ ವಿಚಾರದಲ್ಲಿ ತುಟಿಗೆ ತುಪ್ಪ ಸವರುವ ನೀತಿಗಳನ್ನು ಸರ್ಕಾರಗಳು ಇನ್ನಾದರೂ ಬಿಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಸ್ವಂತ ಹಿಂದುಳಿದ ವರ್ಗದವರೇ ಆಗಿರುವ ಪ್ರಧಾನಿಗಳು ಸಾಮಾಜಿಕ ನ್ಯಾಯವನ್ನು ಅನುಷ್ಠಾನಗೊಳಿಸುವ ಮೂಲಕ ಸಮಬಾಳು ಸಮಪಾಲು ತತ್ವವನ್ನು ಎತ್ತಿಹಿಡಿಯಬೇಕು. ಶೋಷಿತ ವರ್ಗದಲ್ಲಿಯೂ ಸ್ಪೃಶ್ಯ ಸಮುದಾಯ ಅಸ್ಪೃಶ್ಯರನ್ನು ಹತ್ತಿರ ಬಿಟ್ಟುಕೊಳ್ಳದ ಪರಿಸ್ಥಿತಿ ಈಗಲೂ ಇದೆ ಎಂದು ಹೇಳಿದ್ದಾರೆ.

ಮೇಲ್ಜಾತಿಯಲ್ಲಿರುವ ಬಡವರಿಗೆ ಶೇಕಡ 10ರಷ್ಟು ಮೀಸಲಾತಿಯನ್ನು ಜಾರಿಗೆ ತಂದ ಕೇಂದ್ರದ ಬಿಜೆಪಿ ಸರ್ಕಾರ ಪರಿಶಿಷ್ಟ ಜಾತಿ, ಹಿಂದುಳಿದ ವರ್ಗಗಳಲ್ಲಿ ಇರುವ ಅವಕಾಶ ವಂಚಿತರಿಗೆ ಒಳಮೀಸಲಾತಿ ಜಾರಿಗೆ ತರಬಾರದೇಕೆ ಎಂದಿದ್ದಾರೆ.

ತುಳಿತಕ್ಕೆ ಒಳಗಾದವರ ಎಲ್ಲ ಜಾತಿಗಳಿಗೂ ಮೀಸಲಾತಿಯ ಫಲ ದಕ್ಕಬೇಕು ಎಂಬುದು ಸುಪ್ರೀಂಕೋರ್ಟ್ ಆಶಯ ಒಳಮೀಸಲಾತಿಯ ಪರವಾದ ನಿಲುವೇ ಆಗಿದ್ದು ಅದನ್ನು ಜಾರಿಗೊಳಿಸುವುದು ಸಾಮಾಜಿಕ ನ್ಯಾಯದ ಪರಿಪಾಲನೆಯ ಕರ್ತವ್ಯವಾಗಿದೆ. ಪರಿಶಿಷ್ಟ ಜಾತಿ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಒಳ ಮೀಸಲಾತಿ ಜಾರಿಗೊಳಿಸಬೇಕು ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...