alex Certify ಬಿಗ್ ನ್ಯೂಸ್: ಸೆ.15 ರೊಳಗೆ ಒಂದು ರೂ. ದಂಡ ಕಟ್ಟದಿದ್ದರೆ ಪ್ರಶಾಂತ್ ಭೂಷಣ್ ಗೆ ಜೈಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಗ್ ನ್ಯೂಸ್: ಸೆ.15 ರೊಳಗೆ ಒಂದು ರೂ. ದಂಡ ಕಟ್ಟದಿದ್ದರೆ ಪ್ರಶಾಂತ್ ಭೂಷಣ್ ಗೆ ಜೈಲು

ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟಿನ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಅವರಿಗೆ ಒಂದು ರೂಪಾಯಿ ದಂಡ ವಿಧಿಸಲಾಗಿದೆ.

ಈ ದಂಡವನ್ನು ಪಾವತಿಸಲು ಸೆಪ್ಟೆಂಬರ್ 15 ರವರೆಗೆ ಕಾಲಾವಕಾಶ ನೀಡಲಾಗಿದ್ದು, ಒಂದು ವೇಳೆ ನಿಗದಿತ ಅವಧಿಯೊಳಗೆ ದಂಡ ಪಾವತಿಸದಿದ್ದರೆ ಮೂರು ತಿಂಗಳು ಜೈಲು ಅಥವಾ ಮೂರು ವರ್ಷಗಳ ಕಾಲ ವಕೀಲರಾಗಿ ಕಾರ್ಯ ನಿರ್ವಹಿಸದಂತೆ ನಿಷೇಧ ಹೇರಲಾಗುತ್ತದೆ.

ಈ ಮೊದಲು ವಿಚಾರಣೆ ನಡೆಸಿದ್ದ ನ್ಯಾಯಾಲಯ ಕ್ಷಮೆ ಕೋರಿದರೆ ನ್ಯಾಯಾಂಗ ನಿಂದನೆ ಪ್ರಕರಣವನ್ನು ಕೈಬಿಡುವುದಾಗಿ ಹೇಳಿದ್ದು, ಆದರೆ ಪ್ರಶಾಂತ್ ಭೂಷಣ್ ಇದಕ್ಕೆ ನಿರಾಕರಿಸಿದ್ದರು. ತಾವು ಜೈಲಿಗೆ ಹೋಗಲೂ ಸಿದ್ಧ ಎಂದು ಹೇಳಿದ್ದರು.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...