alex Certify ಸಿಎಂ ಯಡಿಯೂರಪ್ಪನವರಿಗೆ ಟಾಂಗ್ ಕೊಟ್ರಾ ಸಿ.ಟಿ. ರವಿ….? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿಎಂ ಯಡಿಯೂರಪ್ಪನವರಿಗೆ ಟಾಂಗ್ ಕೊಟ್ರಾ ಸಿ.ಟಿ. ರವಿ….?

ಚಿಕ್ಕಮಗಳೂರು: ಇತ್ತೀಚೆಗಷ್ಟೇ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿರುವ ಪ್ರವಾಸೋದ್ಯಮ ಸಚಿವ ಸಿ.ಟಿ ರವಿ, ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದರು. ಆದರೀಗ ತಮ್ಮ ವರಸೆ ಬದಲಿಸಿರುವ ಸಿ.ಟಿ ರವಿ, ಸಿಎಂ ಬಿ.ಎಸ್ ಯಡಿಯೂರಪ್ಪನವರಿಗೇ ಟಾಂಗ್ ಕೊಟ್ಟಿದ್ದಾರೆ.

ಪಕ್ಷದ ನಿಯಮದ ಪ್ರಕಾರ ಒಬ್ಬರಿಗೆ ಒಂದೇ ಹುದ್ದೆ ಎಂಬ ಮಾತಿದೆ. ಹೀಗಾಗಿ ಪಕ್ಷ ಸೂಚಿಸಿದ ತಕ್ಷಣ ತಾವು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧ ಎಂದು ಸಿ.ಟಿ. ರವಿ ಹೇಳಿದ್ದರು. ಆದರೆ ಈಗ ಉಲ್ಟಾ ಹೊಡೆದಂತಿದೆ.

ಸುದ್ದಿಗಾರರೊಂದಿಗೆ ಮಾತನಾಡಿರುವ ಸಿ.ಟಿ. ರವಿ, ಪಕ್ಷದ ಅಲಿಖಿತ ನಿಯಮವನ್ನು ವರಿಷ್ಠರೇ ಬದಲಿಸಿದ್ದಾರೆ. ಅಲಿಖಿತ ನಿಯಮದ ಪ್ರಕಾರ ಒಬ್ಬರಿಗೆ ಒಂದೇ ಹುದ್ದೆ ಎಂಬ ವಾದವಿತ್ತು. ಅಲ್ಲದೇ 75 ವರ್ಷ ಮೇಲ್ಪಟ್ಟವರು ಅಧಿಕಾರದಿಂದ ನಿವೃತ್ತಿಯಾಗಬೇಕು ಎಂಬ ನಿಯಮವೂ ಇತ್ತು. ಆದರೆ ವರಿಷ್ಠರೇ ನಿಯಮ ಪಾಲಿಸುತ್ತಿಲ್ಲ ಎಂಬ ಮೂಲಕ ಪರೋಕ್ಷವಾಗಿ ಯಡಿಯೂರಪ್ಪನವರಿಗೆ ಟಾಂಗ್ ನೀಡಿದ್ದಾರೆ ಎನ್ನಲಾಗುತ್ತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...