alex Certify ಬಿಗ್ ನ್ಯೂಸ್: ಕೊನೆಗೂ ಎಚ್ಚೆತ್ತ ಸರ್ಕಾರ‌ – ವಿದ್ಯಾಗಮ ಸ್ಥಗಿತಕ್ಕೆ ನಿರ್ಧಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಗ್ ನ್ಯೂಸ್: ಕೊನೆಗೂ ಎಚ್ಚೆತ್ತ ಸರ್ಕಾರ‌ – ವಿದ್ಯಾಗಮ ಸ್ಥಗಿತಕ್ಕೆ ನಿರ್ಧಾರ

ಬೆಂಗಳೂರು: ಶಿಕ್ಷಕರಿಗೆ ಮಾರಕವಾಗಿದ್ದ ವಿದ್ಯಾಗಮ ಯೋಜನೆಯನ್ನು ತಾತ್ಕಾಲಿಕ ಸ್ಥಗಿತಗೊಳಿಸಲು ಶಿಕ್ಷಣ ಸಚಿವ ಸುರೇಶ್ ಕುಮಾರ್ ನಿರ್ದೇಶನ ನೀಡಿದ್ದಾರೆ.

ವಿದ್ಯಾಗಮ ಯೋಜನೆಯಡಿ ಮಕ್ಕಳಿಗೆ ಪಾಠ ಮಾಡಲು ತೆರಳಿದ್ದ ಸುಮಾರು 100ಕ್ಕೂ ಹೆಚ್ಚು ಶಿಕ್ಷಕರು ಕೊರೊನಾ ಸೋಂಕಿಗೆ ಬಲಿಯಾಗಿದ್ದರು. ಈ ಹಿನ್ನೆಲೆಯಲ್ಲಿ ವಿದ್ಯಾಗಮ ಯೋಜನೆಯನ್ನು ಸ್ಥಗಿತಗೊಳಿಸಬೇಕು ಎಂದು ರಾಜ್ಯಾದ್ಯಂತ ಆಗ್ರಹಗಳು ಕೇಳಿಬಂದಿದ್ದವು. ಅಲ್ಲದೇ ಸರ್ಕಾರಕ್ಕೆ ಅರಿವು ಮೂಡಿಸುವ ನಿಟ್ಟಿನಲ್ಲಿ ಮಾಧ್ಯಮಗಳು ಅಭಿಯಾನ ಆರಂಭಿಸಿದ್ದವು.

ವಿದ್ಯಾಗಮ ಯೋಜನೆ ವಿರುದ್ಧ ಆಕ್ರೋಶ ಹೆಚ್ಚುತ್ತಿದ್ದಂತೆ ಒತ್ತಡಕ್ಕೆ ಮಣಿದ ಸರ್ಕಾರ ಯೋಜನೆ ಸ್ಥಗಿತಗೊಳಿಸಲು ಮುಂದಾಗಿದೆ. ಈ ಕುರಿತು ಶಿಕ್ಷಣ ಸಚಿವ ಸುರೇಶ್ ಕುಮಾರ್, ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಸೂಚನೆ ನೀಡಿದ್ದು, ಜಿಲ್ಲಾವಾರು ವರದಿ ಬರುವವರೆಗೆ ಯೋಜನೆ ತಾತ್ಕಾಲಿಕ ಸ್ಥಗಿತಗೊಳಿಸುವಂತೆ ನಿರ್ದೇಶನ ನೀಡಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...