alex Certify ಬಿಗ್ ನ್ಯೂಸ್: ಮೀಸಲಾತಿಗೆ ಹೈಕೋರ್ಟ್ ಮಧ್ಯಂತರ ತಡೆ – ಎಲ್ಲಾ ಪೌರಾಡಳಿತ ಮೀಸಲು ಅಧಿಸೂಚನೆಗೆ ಬ್ರೇಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಗ್ ನ್ಯೂಸ್: ಮೀಸಲಾತಿಗೆ ಹೈಕೋರ್ಟ್ ಮಧ್ಯಂತರ ತಡೆ – ಎಲ್ಲಾ ಪೌರಾಡಳಿತ ಮೀಸಲು ಅಧಿಸೂಚನೆಗೆ ಬ್ರೇಕ್

ಬೆಂಗಳೂರು: ಪಟ್ಟಣ ಪಂಚಾಯಿತಿ, ಪುರಸಭೆ ಅಧ್ಯಕ್ಷ-ಉಪಾಧ್ಯಕ್ಷರ ಸ್ಥಾನಗಳ ಮೀಸಲು ನಿಗದಿ ಮಾಡಿ ರಾಜ್ಯ ಸರ್ಕಾರ ಹೊರಡಿಸಿದ್ದ ಅಧಿಸೂಚನೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

ದಾವಣಗೆರೆ ಜಿಲ್ಲೆ ಚನ್ನಗಿರಿ ಪುರಸಭೆ, ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪುರಸಭೆ, ಕೊಡಗು ಜಿಲ್ಲೆಯ ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಮೀಸಲಾತಿ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್. ದೇವದಾಸ್ ಅವರು ಇದ್ದ ಏಕಸದಸ್ಯ ಪೀಠ ಅಧಿಸೂಚನೆಗೆ ಮಧ್ಯಂತರ ತಡೆ ನೀಡಿದೆ. ಈ ಮೊದಲೇ ನಗರಸಭೆ ಅಧ್ಯಕ್ಷ -ಉಪಾಧ್ಯಕ್ಷರ ಮೀಸಲಾತಿ ಅಧಿಸೂಚನೆಗೆ ಮಧ್ಯಂತರ ತಡೆ ನೀಡಿ ಪರಿಶೀಲನೆ ಸಮಿತಿಯನ್ನು ರಚಿಸಲಾಗಿದೆ.

ಅಕ್ಟೋಬರ್ 8 ರಂದು ಸರ್ಕಾರ ಪುರಸಭೆ, ಪಟ್ಟಣ ಪಂಚಾಯಿತಿಗಳಿಗೆ ಮೀಸಲಾತಿ ನಿಗದಿ ಮಾಡಿ ಹೊರಡಿಸಿದ್ದ ಅಧಿಸೂಚನೆಗೆ ಮುಂದಿನ ಆದೇಶದವರೆಗೆ ತಡೆ ನೀಡಲಾಗಿದೆ. ವಿಚಾರಣೆಯನ್ನು ಅಕ್ಟೋಬರ್ 21 ಕ್ಕೆ ಮುಂದೂಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...