alex Certify ಯಾರ ಬಗ್ಗೆಯೂ ವೈಯಕ್ತಿಕವಾಗಿ ಮಾತನಾಡಿಲ್ಲ; ನನಗೆ ಮಂಡ್ಯ ಜನತೆಯ ಒಳಿತು ಮುಖ್ಯವಷ್ಟೇ ಎಂದ ಸಂಸದ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಯಾರ ಬಗ್ಗೆಯೂ ವೈಯಕ್ತಿಕವಾಗಿ ಮಾತನಾಡಿಲ್ಲ; ನನಗೆ ಮಂಡ್ಯ ಜನತೆಯ ಒಳಿತು ಮುಖ್ಯವಷ್ಟೇ ಎಂದ ಸಂಸದ

ಮೈಸೂರು: ಮಂಡ್ಯ ಸಂಸದೆ ಸುಮಲಾತಾರನ್ನು ಟೀಕಿಸಿದ ವಿಚಾರವಾಗಿ ಮಾತನಾಡಿರುವ ಸಂಸದ ಪ್ರತಾಪ್ ಸಿಂಹ, ನಾನು ಯಾರ ಬಗ್ಗೆಯೂ ವೈಯಕ್ತಿಕವಾಗಿ ಮಾತನಾಡಿಲ್ಲ. ಯಡಿಯೂರು ಗ್ರಾಮದಲ್ಲಿ ಬ್ರಿಡ್ಜ್ ನಿರ್ಮಾಣ ಕೆಲಸಕ್ಕೆ ಕೆಲವರು ತೊಂದರೆ ಕೊಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಆ ಸಮಸ್ಯೆ ನಿವಾರಿಸೋಣ ಎಂದು ಹೇಳಿದ್ದೆ ಹೊರತು ಯಾರನ್ನೂ ಟೀಕಿಸಿಲ್ಲ ಎಂದು ತಿಳಿಸಿದರು.

ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಪ್ರತಾಪ್ ಸಿಂಹ, ನನ್ನ ಕ್ಷೇತ್ರಕ್ಕೆ ಹೋಗದಿದ್ದರೂ ಮಂಡ್ಯದ ಜನರ ಒಳಿತಾಗಿ ಕೆಲಸ ಮಾಡಿಸುತ್ತೇನೆ. ನನಗೆ ಅಭಿವೃದ್ಧಿ ಮುಖ್ಯ. ಈ ವಿಷಯದಲ್ಲಿ ರಾಜಕೀಯ ಮಾಡುವುದಿಲ್ಲ. ದಶಪಥ ಕಾಮಗಾರಿ ವಿಚಾರದಲ್ಲಿಯೂ ನಾನು ಯಾರ ಬಗ್ಗೆಯೂ ಮಾತನಾಡಿಲ್ಲ. ಯಾರ ಬಗ್ಗೆಯೂ ವೈಯಕ್ತಿಕವಾಗಿ ಮಾತನಾಡುವ ಅಭ್ಯಾಸವೂ ಇಲ್ಲ ಎಂದರು.

ಪ್ರಧಾನಿ ನರೇಂದ್ರ ಮೋದಿ ಜನರ ಅನುಕೂಲಕ್ಕೆಂದು ಬೃಹತ್ ಯೋಜನೆ ನೀಡಿದ್ದಾರೆ. ಅದು ಸಾಕಾರಗೊಳ್ಳಬೇಕು ಎಂಬುದಷ್ಟೇ ನನ್ನ ಉದ್ದೇಶ. ಇದಕ್ಕೆ ಅಡ್ಡಿಯಾದರೆ ಸುಮ್ಮನಿರಲಾಗದು ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...