alex Certify ಪೊಲೀಸ್ ತನಿಖೆಯಲ್ಲಿ ಬಯಲಾಯ್ತು ರಹಸ್ಯ, ಪ್ರೀತಿಸಿ ಮದುವೆಯಾದ ಪತ್ನಿಯನ್ನೇ ಕೊಂದ ಪತಿರಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪೊಲೀಸ್ ತನಿಖೆಯಲ್ಲಿ ಬಯಲಾಯ್ತು ರಹಸ್ಯ, ಪ್ರೀತಿಸಿ ಮದುವೆಯಾದ ಪತ್ನಿಯನ್ನೇ ಕೊಂದ ಪತಿರಾಯ

ಹಾಸನ: ಪತಿ ಅಕ್ರಮ ಸಂಬಂಧ ಹೊಂದಿದ್ದರಿಂದ ನೊಂದ ಮಹಿಳೆ ತವರುಮನೆ ಸೇರಿಕೊಂಡಿದ್ದು, ಜೀವನಾಂಶ ಕೊಡುವಂತೆ ದಾವೆ ಹೂಡಿದ್ದಾಳೆ. ಇದರಿಂದ ಆಕ್ರೋಶಗೊಂಡ ಪತಿರಾಯ ಪತ್ನಿಯನ್ನೇ ಕೊಲೆ ಮಾಡಿದ ಘಟನೆ ಬೆಳಕಿಗೆ ಬಂದಿದೆ.

ಸುಷ್ಮಿತಾ(26) ಕೊಲೆಯಾದ ಮಹಿಳೆ ಎಂದು ಗುರುತಿಸಲಾಗಿದೆ. 28 ವರ್ಷದ ನಾಗರಾಜನನ್ನು ಪ್ರೀತಿಸಿ ಮದುವೆಯಾಗಿದ್ದ ಸುಷ್ಮಿತಾ ಅವರು ಮತ್ತೊಬ್ಬ ಮಹಿಳೆಯೊಂದಿಗೆ ನಾಗರಾಜ್ ಅಕ್ರಮ ಸಂಬಂಧ ಬೆಳೆಸಿದ್ದರಿಂದ ಮನನೊಂದು ತವರು ಮನೆ ಸೇರಿಕೊಂಡಿದ್ದರು. ಪತ್ನಿ ಜೀವನಾಂಶಕ್ಕಾಗಿ ನ್ಯಾಯಾಲಯದಲ್ಲಿ ದಾವೆ ಹೂಡಿದ್ದರಿಂದ ಆಕ್ರೋಶಗೊಂಡ ನಾಗರಾಜ ಪತ್ನಿಯನ್ನು ಕೊಲೆ ಮಾಡಿ ಮೃತದೇಹವನ್ನು ಕೆರೆಗೆ ಎಸೆದಿದ್ದ.

ಈ ಬಗ್ಗೆ ತನಿಖೆ ಕೈಗೊಂಡ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ನಾಗರಾಜ ಪತ್ನಿಯನ್ನು ಕೊಲೆ ಮಾಡಲು ಸಹಕಾರ ನೀಡಿದ ಆತನ ತಂದೆ, ತಾಯಿ, ಸಹೋದರ ಸೇರಿದಂತೆ 5 ಮಂದಿಯನ್ನು ಬಂಧಿಸಲಾಗಿದೆ ಎಂದು ಹಾಸನ ಪೊಲೀಸ್ ಅಧೀಕ್ಷಕ ಶ್ರೀನಿವಾಸಗೌಡ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...