alex Certify ದೇವ ದೀಪಾವಳಿಯಲ್ಲಿ ಪ್ರಧಾನಿ ಮೋದಿ ಭಾಗಿ: ಹಲವು ಯೋಜನೆ ಉದ್ಘಾಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದೇವ ದೀಪಾವಳಿಯಲ್ಲಿ ಪ್ರಧಾನಿ ಮೋದಿ ಭಾಗಿ: ಹಲವು ಯೋಜನೆ ಉದ್ಘಾಟನೆ

ನವದೆಹಲಿ: ಉತ್ತರಪ್ರದೇಶದ ವಾರಣಾಸಿಗೆ ಪ್ರಧಾನಿ ನರೇಂದ್ರ ಮೋದಿ ಇಂದು ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 2.10 ಗಂಟೆಗೆ ವಾರಣಾಸಿಗೆ ಆಗಮಿಸಲಿರುವ ಅವರು ವಾರಣಾಸಿ –ಪ್ರಯಾಗ್ ರಾಜ್ ಹೆದ್ದಾರಿ ಉದ್ಘಾಟನೆ ನೆರವೇರಿಸಲಿದ್ದಾರೆ.

ಬಳಿಕ ಗಂಗಾನದಿಯಲ್ಲಿ ಬೋಟ್ ರೈಡ್ ಮಾಡಲಿದ್ದಾರೆ. ನಂತರ ಕಾಶಿ ವಿಶ್ವನಾಥ ದೇವಾಲಯಕ್ಕೆ ಭೇಟಿ ನೀಡಲಿದ್ದು, ಕಾಶಿ ವಿಶ್ವನಾಥ ಕಾರಿಡಾರ್ ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸಲಿದ್ದಾರೆ. ವಾರಣಾಸಿಯಲ್ಲಿ ಜನರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ರಾಜಘಾಟ್ ನಲ್ಲಿ ದೇವ ದೀಪಾವಳಿಗೆ ಚಾಲನೆ ನೀಡಲಿದ್ದಾರೆ. ಸಾರನಾಥದಲ್ಲಿ ಲೈಟ್ ಅಂಡ್ ಸೌಂಡ್ ಶೋ ನಲ್ಲಿ ಪ್ರಧಾನಿ ಭಾಗಿಯಾಗಲಿದ್ದು, ಬಳಿಕ ದೆಹಲಿಗೆ ವಾಪಸಾಗಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...