alex Certify ಜೀವಂತವಾಗಿದ್ದವನನ್ನು ಮೃತಪಟ್ಟಿದ್ದಾನೆಂದು ಘೋಷಿಸಿದ ವೈದ್ಯರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜೀವಂತವಾಗಿದ್ದವನನ್ನು ಮೃತಪಟ್ಟಿದ್ದಾನೆಂದು ಘೋಷಿಸಿದ ವೈದ್ಯರು

ಕೊಪ್ಪಳ: ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಮೃತಪಟ್ಟಿರುವುದಾಗಿ ವೈದ್ಯರು ಹೇಳಿದ ನಂತರ ಆತ ಇನ್ನೂ ಬದುಕಿರುವುದು ಗೊತ್ತಾಗಿ ಕುಟುಂಬದವರು ಬೇರೆ ಆಸ್ಪತ್ರೆಗೆ ದಾಖಲಿಸಿದ ಘಟನೆ ಕೊಪ್ಪಳದಲ್ಲಿ ನಡೆದಿದೆ.

ಕೊಪ್ಪಳ ಸಮೀಪದ ಲಾಚನಕೇರಿ ಬಳಿ ಜನವರಿ 3 ರಂದು ನಡೆದ ಅಪಘಾತದಲ್ಲಿ ಪಕೀರಪ್ಪ ದೊಡ್ಡಮನಿ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದು, ರಾತ್ರಿ 9 ಗಂಟೆಗೆ ಕೊಪ್ಪಳದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮರುದಿನ ಬೆಳಗ್ಗೆ ಆ ವ್ಯಕ್ತಿ ಬದುಕಿದ್ದರೂ ಡಿಸ್ಚಾರ್ಜ್ ಸಮ್ಮರಿಯಲ್ಲಿ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಮೃತದೇಹ ಕೊಡುವಂತೆ ಕುಟುಂಬದವರು ಕೇಳಿದಾಗ ವ್ಯಕ್ತಿಗೆ ಜೀವ ಇರುವುದು ಗೊತ್ತಾಗಿದೆ. ಕೂಡಲೇ ಕುಟುಂಬದವರು ಆತನನ್ನು ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಎರಡು ಗಂಟೆಗಳ ಕಾಲ ಚಿಕಿತ್ಸೆ ನೀಡಲಾಗಿದೆ. ನಂತರದಲ್ಲಿ ಉಸಿರಾಟದ ಸಮಸ್ಯೆಯಿಂದ ಪಕೀರಪ್ಪ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಇದರಿಂದ ಆಕ್ರೋಶಗೊಂಡ ಕುಟುಂಬದವರು ಖಾಸಗಿ ಆಸ್ಪತ್ರೆಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...