alex Certify BIG NEWS: ತಾಲೂಕು, ಜಿಲ್ಲಾ ಪಂಚಾಯಿತಿ ಚುನಾವಣೆ ಬಗ್ಗೆ ಸಚಿವ ಈಶ್ವರಪ್ಪ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ತಾಲೂಕು, ಜಿಲ್ಲಾ ಪಂಚಾಯಿತಿ ಚುನಾವಣೆ ಬಗ್ಗೆ ಸಚಿವ ಈಶ್ವರಪ್ಪ ಮಾಹಿತಿ

ಬೆಂಗಳೂರು: ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆ ಮುಂದೂಡುವ ಪ್ರಶ್ನೆಯೇ ಇಲ್ಲ. ನಿಗದಿಯಂತೆಯೇ ತಾಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯತಿ ಚುನಾವಣೆ ನಡೆಯಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.

ವಿಧಾನಸಭೆಯಲ್ಲಿ ಶಾಸಕ ಸುನಿಲ್ ಕುಮಾರ್ ಈ ಕುರಿತಾಗಿ ಪ್ರಶ್ನಿಸಿದಾಗ ಮಾಹಿತಿ ನೀಡಿದ ಸಚಿವರು, ನಿಗದಿಯಂತೆಯೇ ತಾಪಂ, ಜಿಪಂ ಚುನಾವಣೆ ನಡೆಯಲಿದ್ದು, ಅಧಿಕಾರ ಅವಧಿ ಮುಗಿಯುತ್ತಿದ್ದಂತೆ ಚುನಾವಣೆ ನಡೆಸಲಾಗುವುದು. ಜಿಲ್ಲಾಧಿಕಾರಿಗಳು ಕ್ಷೇತ್ರ ಮರುವಿಂಗಡಣೆ, ಮೀಸಲಾತಿ ಸೇರಿದಂತೆ ಅಗತ್ಯ ಕ್ರಮ ಕೈಗೊಂಡಿದ್ದಾರೆ ಎಂದು ಹೇಳಿದ್ದಾರೆ.

ಯಾವುದೇ ಕಾರಣಕ್ಕೂ ಚುನಾವಣೆ ಮುಂದೂಡಿಕೆ ಮಾಡುವುದಿಲ್ಲ. ಚುನಾವಣಾ ಆಯೋಗ ಯಾವುದೇ ಕ್ಷಣ ಚುನಾವಣೆಯನ್ನು ಘೋಷಣೆ ಮಾಡಿದರೂ ಚುನಾವಣೆ ನಡೆಯಲಿದೆ. ಕ್ಷೇತ್ರಗಳ ಮಾರ್ಗಸೂಚಿಯಲ್ಲಿ ಮಾತ್ರ ಗೊಂದಲ ಇರುವುದರಿಂದ ಮಾರ್ಗಸೂಚಿಯಲ್ಲಿನ ಲೋಪದೋಷ ಸರಿಪಡಿಸಿ ಚುನಾವಣೆ ನಡೆಸಬೇಕೆಂಬುದು ನಮ್ಮ ಮನವಿಯಾಗಿದೆ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...