ಬೆಂಗಳೂರು: ನಾಳೆಯಿಂದ ನಡೆಯಬೇಕಿದ್ದ ಕೆ ಪಿ ಎಸ್ ಸಿ (ಕರ್ನಾಟಕ ಲೋಕಸೇವಾ ಆಯೋಗ) ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಆಯೋಗ ತಿಳಿಸಿದೆ.
ಈ ಕುರಿತು ಅಧಿಕೃತ ಪ್ರಕಟಣೆ ಹೊರಡಿಸಿರುವ ಆಯೋಗ, ಏಪ್ರಿಲ್ 22ರಿಂದ ಏಪ್ರಿಲ್ 30ರವರೆಗೆ ನಿಗದಿಯಾಗಿದ್ದ 2020ನೇ ಸಾಲಿನ ದ್ವಿತೀಯ ಅಧಿವೇಶನದ ಇಲಾಖೆ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಹೇಳಿದೆ.
ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕೋವಿಡ್ ನಿಯಂತ್ರಣಕ್ಕೆ ನೈಟ್ ಕರ್ಫ್ಯೂ ಹಾಗೂ ವೀಕೆಂಡ್ ಕರ್ಫ್ಯೂ ಜಾರಿ ಮಾಡಿದ್ದು, ಮಾರ್ಗಸೂಚಿ ಅನ್ವಯ ಕೆ ಪಿ ಎಸ್ ಸಿ ಪರೀಕ್ಷೆಗಳನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದ್ದು, ಮುಂದಿನ ಪರೀಕ್ಷಾ ದಿನಾಂಕವನ್ನು ನಂತರದ ದಿನಗಳಲ್ಲಿ ಪ್ರಕಟಿಸುವುದಾಗಿ ತಿಳಿಸಿದೆ.