alex Certify BIG NEWS: ಬಿಜೆಪಿ ನಾಯಕರು ‘ಪವರ್ ಬೆಗ್ಗರ್ಸ್’; ಯೋಗೇಶ್ವರ್, ವಿಜಯೇಂದ್ರ ದೆಹಲಿ ಭೇಟಿಗೆ ಡಿ.ಕೆ.ಶಿವಕುಮಾರ್ ಲೇವಡಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಿಜೆಪಿ ನಾಯಕರು ‘ಪವರ್ ಬೆಗ್ಗರ್ಸ್’; ಯೋಗೇಶ್ವರ್, ವಿಜಯೇಂದ್ರ ದೆಹಲಿ ಭೇಟಿಗೆ ಡಿ.ಕೆ.ಶಿವಕುಮಾರ್ ಲೇವಡಿ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸಂಕಷ್ಟದಿಂದ ಜನರು ಪರದಾಡುತ್ತಿದ್ದರೆ ಬಿಜೆಪಿ ನಾಯಕರು ಅಧಿಕಾರಕ್ಕಾಗಿ ವರಿಷ್ಠರ ಭೇಟಿಗೆ ದೆಹಲಿಯಲ್ಲಿ ಬೀಡುಬಿಟ್ಟಿದ್ದಾರೆ ಅವರೆಲ್ಲರೂ ಪವರ್ ಬೆಗ್ಗರ್ಸ್ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಲೇವಡಿ ಮಾಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ಸಚಿವ ಸಿ.ಪಿ.ಯೋಗೇಶ್ವರ್, ಬಿ.ವೈ.ವಿಜಯೇಂದ್ರ ದೆಹಲಿ ಭೇಟಿಗೆ ಕಿಡಿಕಾರಿದ ಅವರು, ಸಿಎಂ ಯಡಿಯೂರಪ್ಪನವರು ಯಾರ್ಯಾರನ್ನೋ ಎಲ್ಲೆಲ್ಲಿಂದಲೊ ಕರೆತಂದರು. ಈಗ ಅವರೇ ಎಲ್ಲವನ್ನು ಅನುಭವಿಸುತ್ತಿದ್ದಾರೆ. ಅವರು ಮಾಡಿದ್ದನ್ನು ಅವರು ಅನುಭವಿಸುತ್ತಿದ್ದಾರೆ ಎಂದು ವ್ಯಂಗವಾಡಿದರು.

ಇದೇ ವೇಳೆ ರಾಜ್ಯ ಸರ್ಕಾರದ ಪ್ಯಾಕೆಜ್ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಡಿಕೆಶಿ, ರಾಜ್ಯದಲ್ಲಿ ಅಸಂಘಿತ ಕಾರ್ಮಿಕರು ಸಾಕಷ್ಟು ಜನರಿದ್ದಾರೆ. ಅವರೆಲ್ಲರೂ ಪರಿಹಾರಕ್ಕೆ ಅರ್ಜಿ ಹಾಕಲು ಆಗುತ್ತಾ? ಅರ್ಜಿ ಹಾಕಲು ಗೊತ್ತಿದ್ದರೆ ಅವರು ವಿಧಾನಸೌಧಕ್ಕೆ ಬರುತ್ತಿದ್ದರು ಗೊತ್ತಿಲ್ಲದ ಕಾರಣಕ್ಕೆ ಬೀದಿ ಬದಿ ವ್ಯಾಪಾರ ಮಾಡುತ್ತಿದ್ದಾರೆ. ಸರ್ಕಾರದ ಆರ್ಥಿಕ ಪ್ಯಾಕೇಜ್ ಸಮರ್ಪಕವಾಗಿಲ್ಲ ಎಂದರು.

ಇನ್ನು ಉತ್ತರ ಕರ್ನಾಟಕ ಭಾಗದ ರೈತರ ಪರಿಸ್ಥಿತಿ ಅಯೋಮಯವಾಗಿದೆ. ಅವರನ್ನು ಕಾಪಾಡುವುದು ಹೇಗೆಂದು ಗೊತ್ತಿಲ್ಲ. ರೈತರು ಬೆಳೆದ ತರಕಾರಿ, ಹಣ್ಣು, ಹೂವುಗಳನ್ನು ಮಾರಾಟ ಮಾಡಲಾಗದೇ ಕಂಗಾಲಾಗಿದ್ದಾರೆ. ರೈತರ ಬೆಳೆಗಳನ್ನು ಸರ್ಕಾರವೇ ಖರೀದಿ ಮಾಡಲಿ ಎಂದು ಆಗ್ರಹಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...