alex Certify BIG NEWS: ಬಸವರಾಜ್ ಬೊಮ್ಮಾಯಿ ಭೇಟಿಯಾದ ಹೆಚ್.ಡಿ.ರೇವಣ್ಣ; ಕುತೂಹಲ ಮೂಡಿಸಿದ ಉಭಯ ನಾಯಕರ ಚರ್ಚೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಸವರಾಜ್ ಬೊಮ್ಮಾಯಿ ಭೇಟಿಯಾದ ಹೆಚ್.ಡಿ.ರೇವಣ್ಣ; ಕುತೂಹಲ ಮೂಡಿಸಿದ ಉಭಯ ನಾಯಕರ ಚರ್ಚೆ

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ, ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ರಾಜ್ಯಕ್ಕೆ ಭೇಟಿ ಬೆನ್ನಲ್ಲೇ ರಾಜ್ಯ ರಾಜಕೀಯ ಚಟುವಟಿಕೆಗಳು ಮತ್ತೆ ಗರಿಗೆದರಿದ್ದು, ಇದೀಗ ಜೆಡಿಎಸ್ ನಾಯಕ, ಶಾಸಕ ಹೆಚ್.ಡಿ.ರೇವಣ್ಣ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿಯಾಗಿರುವುದು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.

ಕೋವಿಡ್ ಜಾಗೃತಿ ಮೂಡಿಸುವ ಸಂದೇಶ ಮಂಚದ ಮೇಲೆ ಬರೆದ ಕಲಾವಿದ

ಸಚಿವ ಬೊಮ್ಮಾಯಿ ನಿವಾಸದಲ್ಲಿ ಭೇಟಿಯಾದ ಇಬ್ಬರೂ ನಾಯಕರು ಸುಮಾರು ಅರ್ಧಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿದ್ದಾರೆ. ಈ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ರೇವಣ್ಣ, ನಾನು ಬೊಮ್ಮಾಯಿ ಹಳೆ ಸ್ನೇಹಿತರು. ಇದೊಂದು ಸಹಜ ಭೇಟಿ. ರಾಜಕೀಯವಾಗಿ ಯಾವುದೇ ಚರ್ಚೆಯನ್ನೂ ನಡೆಸಿಲ್ಲ, ಹೊಳೇನರಸಿಪುರದಲ್ಲಿ ಪೊಲೀಸ್ ಠಾಣೆ ನಿರ್ಮಾಣ ಮಾಡಬೇಕಿತ್ತು ಈ ನಿಟ್ಟಿನಲ್ಲಿ ಭೇಟಿಯಾಗಿದ್ದೆ ಅಷ್ಟೇ ಎಂದರು.

ಅನ್ ಲಾಕ್ 2.0 ಗೆ ಮುಹೂರ್ತ ಫಿಕ್ಸ್: ಯಾವುದಕ್ಕೆಲ್ಲ ಅವಕಾಶ….? ಇಲ್ಲಿದೆ ಮಾಹಿತಿ

ಇನ್ನು ಸಿಎಂ ಬಿ ಎಸ್ ವೈ ಬದಲಾವಣೆ ವಿಚಾರದ ಬಗ್ಗೆ ನನಗೆ ಗೊತ್ತಿಲ್ಲ. ವಿಪಕ್ಷ ನಾಯಕ ಸಿದ್ದರಾಮಯ್ಯ ಕ್ಷೇತ್ರ ಬದಲಾವಣೆ 2023ಕ್ಕೆ ನೋಡೋಣ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...