alex Certify ಮಲತಾಯಿ ಮಾತು ಕೇಳಿ ಮಕ್ಕಳಿಗೆ ಚಿತ್ರಹಿಂಸೆ ನೀಡಿದ ಕಿರಾತಕ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಲತಾಯಿ ಮಾತು ಕೇಳಿ ಮಕ್ಕಳಿಗೆ ಚಿತ್ರಹಿಂಸೆ ನೀಡಿದ ಕಿರಾತಕ ಅರೆಸ್ಟ್

ಬೆಂಗಳೂರು: ಎರಡನೆಯ ಪತ್ನಿಯ ಮಾತು ಕೇಳಿ ಮೊದಲ ಪತ್ನಿಯ ಮಕ್ಕಳಿಗೆ ಚಿತ್ರಹಿಂಸೆ ನೀಡಿದ ವ್ಯಕ್ತಿಯನ್ನು ಜೆಪಿ ನಗರ ಪೊಲೀಸರು ಬಂಧಿಸಿದ್ದಾರೆ.

ಸೆಲ್ವರಾಜ್ ಬಂಧಿತ ಆರೋಪಿ. ಮಕ್ಕಳು ಹಠ ಮಾಡುತ್ತಾರೆ ಎಂದು ಎರಡನೇ ಪತ್ನಿಯ ಚಾಡಿ ಮಾತು ಕೇಳಿ ಅಪ್ರಾಪ್ತ ಮಕ್ಕಳ ಮೇಲೆ ಕ್ರೌರ್ಯ ತೋರಿದ್ದಾನೆ. ಕಾಲು, ಭುಜ, ಮೊಣಕೈ, ಮುಖ, ಪಾದಗಳಿಗೆ ಹೊಡೆದು, ಚಾಕುವಿನಿಂದ ಬರೆ ಹಾಕಿ ಚಿತ್ರಹಿಂಸೆ ನೀಡಿದ್ದಾನೆ. ಕಿರುಕುಳ ತಾಳದೇ ಮಕ್ಕಳು ಮನೆಯಿಂದ ಹೊರಗೆ ಓಡಿಬಂದಿದ್ದಾರೆ. ಅಕ್ಕಪಕ್ಕದವರು ಮಕ್ಕಳನ್ನು ರಕ್ಷಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಮೂರು ತಿಂಗಳ ಹಿಂದೆ ಸೆಲ್ವರಾಜ್ ಮೊದಲ ಪತ್ನಿ ಮೃತಪಟ್ಟಿದ್ದರು. ಮೂವರು ಮಕ್ಕಳಿದ್ದು, ಎರಡನೇ ಪತ್ನಿಯನ್ನು ಮನೆಗೆ ಕರೆದುಕೊಂಡು ಬಂದಿದ್ದ ಸೆಲ್ವ ಆಕೆಯ ಮಾತು ಕೇಳಿ ಮಕ್ಕಳ ಮೇಲೆ ಕ್ರೌರ್ಯ ಮೆರೆದಿದ್ದಾನೆ. ಜೆಪಿ ನಗರ ಠಾಣೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದು, ಮೂವರು ಮಕ್ಕಳಿಗೆ ಬಾಲಭವನದಲ್ಲಿ ಆಶ್ರಯ ನೀಡಲಾಗಿದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...