ಬೆಂಗಳೂರು: ಎಲ್ಲಾ ಸಾರಿಗೆ ಪ್ರಯಾಣಿಕ ವಾಹನಗಳ ಮಾಲೀಕರಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ. ಶೇಕಡ 50 ರಷ್ಟು ತೆರಿಗೆಯ ವಿನಾಯಿತಿ ನೀಡಲಾಗಿದೆ.
ರಾಜ್ಯದಲ್ಲಿ ಕೊರೋನಾ ಕಾರಣದಿಂದ ನಿರ್ಬಂಧ ಜಾರಿಯಲ್ಲಿರುವುದರಿಂದ ಜೂನ್ ತಿಂಗಳಲ್ಲಿ ಪಾವತಿಸಬೇಕಿದ್ದ ಮೋಟಾರು ವಾಹನ ತೆರಿಗೆಯಲ್ಲಿ ಶೇಕಡ 50 ರಷ್ಟು ವಿನಾಯಿತಿ ನೀಡಲಾಗಿದೆ.
ಸಾರಿಗೆ ಸಚಿವರಾದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು, ಎಲ್ಲಾ ಪ್ರಯಾಣಿಕ ವಾಹನಗಳಿಗೆ ಅನುಕೂಲವಾಗುವ ತೆರಿಗೆ ವಿನಾಯಿತಿ ನೀಡಿ ಕ್ರಮಕೈಗೊಂಡಿದ್ದಾರೆ. ಇದರಿಂದ ಆಟೋ, ಟ್ಯಾಕ್ಸಿ, ಮೊದಲಾದ ಪ್ರಯಾಣಿಕ ವಾಹನಗಳ ಮಾಲೀಕರಿಗೆ ಅನುಕೂಲವಾಗಲಿದೆ. ಇದೊಂದು ವಿಶೇಷ ಪ್ರಕರಣವೆಂದು ಪರಿಗಣಿಸಿ ತೆರಿಗೆ ವಿನಾಯಿತಿ ನೀಡಲಾಗಿದ್ದು, ಹೊಸ ವಾಹನಗಳ ನೋಂದಣಿಗೆ ಇದು ಅನ್ವಯವಾಗುವುದಿಲ್ಲ ಎಂದು ಹೇಳಲಾಗಿದೆ.