alex Certify ತೋಟದ ಮನೆಯಲ್ಲಿ ಮಹಿಳೆ ಬೆತ್ತಲೆಗೊಳಿಸಿ ಕೂಡಿ ಹಾಕಿ ಹಲ್ಲೆ: ಬಸ್ ಚಾಲಕ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತೋಟದ ಮನೆಯಲ್ಲಿ ಮಹಿಳೆ ಬೆತ್ತಲೆಗೊಳಿಸಿ ಕೂಡಿ ಹಾಕಿ ಹಲ್ಲೆ: ಬಸ್ ಚಾಲಕ ಅರೆಸ್ಟ್

ಬೆಂಗಳೂರು: ಮಹಿಳೆಯನ್ನು ಮದುವೆಯಾಗುವುದಾಗಿ ನಂಬಿಸಿ ಆಕೆಯಿಂದ ಹಣ ಪಡೆದುಕೊಂಡಿದ್ದಲ್ಲದೆ, ಬೆತ್ತಲೆಗೊಳಿಸಿ ಎರಡು ದಿನ ತೋಟದ ಮನೆಯಲ್ಲಿ ಕೂಡಿಹಾಕಿದ್ದ ಬಸ್ ಚಾಲಕನನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ.

ಬಿಎಂಟಿಸಿ ಬಸ್ ಚಾಲಕ ವಿಶ್ವನಾಥ್(42) ಬಂಧಿತ ಆರೋಪಿ ಎಂದು ಹೇಳಲಾಗಿದೆ. ಬಸವೇಶ್ವರನಗರ ನಿವಾಸಿಯಾಗಿರುವ 40 ವರ್ಷದ ಮಹಿಳೆ 2019 ರಲ್ಲಿ ಬಿಎಂಟಿಸಿ ಬಸ್ ನಲ್ಲಿ ಪ್ರತಿದಿನ ಪ್ರಯಾಣಿಸುತಿದ್ದ ಸಂದರ್ಭದಲ್ಲಿ ವಿಶ್ವನಾಥ್ ಪರಿಚಯವಾಗಿತ್ತು.

ಇಬ್ಬರ ನಡುವೆ ಸಲುಗೆ ಬೆಳೆದಿದ್ದು, ಮದುವೆಯಾಗುವುದಾಗಿ ನಂಬಿಸಿದ್ದ ವಿಶ್ವನಾಥ ಮಹಿಳೆಯಿಂದ 2.70 ಲಕ್ಷ ರೂಪಾಯಿ ಪಡೆದುಕೊಂಡಿದ್ದು, ಎರಡು ವರ್ಷಗಳಿಂದ ಹಣ ಕೊಡದೆ ಸತಾಯಿಸುತ್ತಿದ್ದ.

ಮಾರ್ಚ್ 23 ರಂದು ತಿಪಟೂರಿನ ಹಾಲು ಕುರ್ಕೆ ಸಮೀಪದ ತೋಟದ ಮನೆಗೆ ಕರೆದುಕೊಂಡು ಹೋಗಿ ಬೆತ್ತಲೆಗೊಳಿಸಿ ಎರಡು ದಿನ ಕೂಡಿ ಹಾಕಿ ಹಲ್ಲೆ ಮಾಡಿ ಹಿಂಸೆ ನೀಡಿದ್ದಾನೆ. ಹಣ ಕೇಳಿದರೆ ಮಾರಕಾಸ್ತ್ರದಿಂದ ಕೊಲೆ ಮಾಡುವುದಾಗಿ ಬೆದರಿಸಿದ್ದಾರೆ ಎಂದು ಮಹಿಳೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ ಎನ್ನಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...