alex Certify ಕುಮಾರಸ್ವಾಮಿಯವರಿಗೆ ಹೆದರಿ ಜಾತಿ ಗಣತಿ ಬಿಡುಗಡೆ ಮಾಡಿಲ್ಲ; HDK ವಿರುದ್ಧ ಸಿದ್ದರಾಮಯ್ಯ ಆರೋಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕುಮಾರಸ್ವಾಮಿಯವರಿಗೆ ಹೆದರಿ ಜಾತಿ ಗಣತಿ ಬಿಡುಗಡೆ ಮಾಡಿಲ್ಲ; HDK ವಿರುದ್ಧ ಸಿದ್ದರಾಮಯ್ಯ ಆರೋಪ

ಬೆಂಗಳೂರು: ನಾನು ಸಿಎಂ ಆಗಿದ್ದಾಗ ಜಾತಿ ಸಮೀಕ್ಷೆ ಪೂರ್ಣಗೊಂಡಿರಲಿಲ್ಲ, ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದಾಗ ಜಾತಿ ಗಣತಿ ಸಮೀಕ್ಷೆ ಪೂರ್ಣಗೊಂಡಿತ್ತು. ಆಗ ಪುಟ್ಟರಂಗಶೆಟ್ಟಿ ಹಿಂದುಳಿದ ವರ್ಗಗಳ ಸಚಿವರಾಗಿದ್ದರು. ವರದಿ ಬಿಡುಗಡೆ ಮಾಡಲು ಮುಂದಾಗಿದ್ದಕ್ಕೆ ಕುಮಾರಸ್ವಾಮಿ ಹೆದರಿಸಿಬಿಟ್ಟರು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಜಾತಿ ಗಣತಿ ವರದಿ ಸಿದ್ದವಿದೆ ಎಂದು ನನ್ನ ಬಳಿ ಪುಟ್ಟರಂಗಶೆಟ್ಟಿ ಹೇಳಿದ್ದರು. ಬಿಡುಗಡೆಗೆ ಪುಟ್ಟರಂಗಶೆಟ್ಟಿ ಪ್ರಯತ್ನವನ್ನೂ ಮಾಡಿದ್ದರು. ಆದರೆ ಕುಮಾರಸ್ವಾಮಿ ಬಿಡಲಿಲ್ಲ. ಸಚಿವರನ್ನು ಕುಮಾರಸ್ವಾಮಿ ಹೆದರಿಸಿಬಿಟ್ಟರು. ಹಾಗಾಗಿ ಕುಮಾರಸ್ವಾಮಿಯವರಿಗೆ ಹೆದರಿ ಅವರು ಜಾತಿ ಗಣತಿ ವರದಿ ಬಿಡುಗಡೆ ಮಾಡುವ ಗೋಜಿಗೆ ಹೋಗಲಿಲ್ಲ ಎಂದು ಆರೋಪಿಸಿದರು.

ಕೊರೊನಾ ಎರಡನೇ ಡೋಸ್ ಪಡೆಯಲು ಮರೆತಿದ್ದೀರಾ….? ಚಿಂತೆ ಬೇಡ, ಹೀಗೆ ಮಾಡಿ

ಇದನ್ನು ನಾನು ಹೇಳಿದರೆ ಕೂಮಾರಸ್ವಾಮಿಯವರಿಗೆ ಕೋಪ ಬರುತ್ತೆ. ನನ್ನ ವಿರುದ್ಧ ಆರೋಪ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಕೂತ್ಕೊಂಡು ಬರೆಸಿಬಿಟ್ಟಿದ್ದಾನೆ ಎನ್ನುತ್ತಿದ್ದಾರೆ ಎಂದು ಗುಡುಗಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...