ಬೆಂಗಳೂರು: ಚಿಕ್ಕಮಗಳೂರಿನ ಬಾಬಾಬುಡನ್ ಗಿರಿ ದತ್ತಪೀಠದ ಪೂಜಾ ಕೈಂಕರ್ಯ ವಿಚಾರವಾಗಿ ಹೈಕೋರ್ಟ್ ನೀಡಿರುವ ತೀರ್ಪು ಸ್ವಾಗತಾರ್ಹ ಎಂದಿರುವ ಸಚಿವ ಸುನೀಲ್ ಕುಮಾರ್, ಅರ್ಚಕರ ನೇಮಕದ ಬಗ್ಗೆ ಶೀಘ್ರ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
ಮುಜಾವರ್ ನೇಮಕ ಆದೇಶ ರದ್ದುಗೊಳಿಸಿರುವ ನ್ಯಾಯಾಲಯ, ಅರ್ಚಕರ ನೇಮಕ ಕುರಿತಂತೆ ರಾಜ್ಯ ಸರ್ಕಾರ ಒಂದು ಸಮಿತಿ ರಚಿಸಿ, ಸಮಿತಿ ಅಭಿಪ್ರಾಯದಂತೆ ಅರ್ಚಕರ ನೇಮಕ ಮಾಡುವಂತೆ ಸೂಚಿಸಿದೆ. ಈ ನಿಟ್ಟಿನಲ್ಲಿ ಹೈಕೋರ್ಟ್ ನೀಡಿರುವ ವಿಶೇಷ ತೀರ್ಪು ಸಂತಸ ತಂದಿದೆ ಎಂದರು.
ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್: SBI ನ 606 ಹುದ್ದೆಗಳಿಗೆ ನೇಮಕಾತಿ
ಸುಪ್ರೀಂ ಕೋರ್ಟ್ ಕೂಡ ಈ ಹಿಂದೆ ಇದೇ ಅಭಿಪ್ರಾಯ ವ್ಯಕ್ತಪಡಿಸಿತ್ತು. ಆದರೆ ಅಂದಿನ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕೋರ್ಟ್ ಆದೇಶ ಉಲ್ಲಂಘನೆ ಮಾಡಿ ಅರ್ಚಕರ ನೇಮಕದ ಬದಲು ಮುಜಾವರ್ ಗಳ ನೇಮಕ ಮಾಡಿ, ಅವರಿಂದ ಪೂಜೆ ಮುಂದುವರೆಸುವಂತೆ ಮಾಡಿತ್ತು. ಹಿಂದೂ ಭಕ್ತರ ಭಾವನೆಗಳಿಗೆ ಬೆಲೆ ನೀಡದೇ, ಜನಾಭಿಪ್ರಾಯವನ್ನೂ ಸಂಗ್ರಹಿಸದೇ ಕೈಗೊಂಡ ನಿರ್ಣಯದಿಂದ ಎಲ್ಲರಿಗೂ ನೋವುಟಾಗಿತ್ತು. ಹಾಗಾಗಿ ಇದನ್ನು ಪ್ರಶ್ನಿಸಿ ಕೋರ್ಟ್ ಮೊರೆ ಹೋಗಿದ್ದೆವು. ಇಂದು ಐತಿಹಾಸಿಕ ತೀರ್ಪು ಪ್ರಕಟವಾಗುವ ಮೂಲಕ ಹೋರಾಟಗಾರರಿಗೆ ಜಯ ಸಿಕ್ಕಿದೆ ಎಂದು ತಿಳಿಸಿದರು.