ಬೆಂಗಳೂರು: ರಾಜ್ಯದಲ್ಲಿ ಇಂದು 539 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 29,75,067 ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಇಂದು 17 ಜನ ಸೋಂಕಿತರು ಮೃತಪಟ್ಟಿದ್ದಾರೆ. ಇದುವರೆಗೆ 37,780 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಇಂದು 591 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 29,24,693 ಜನ ಗುಣಮುಖರಾಗಿದ್ದಾರೆ. ಪಾಸಿಟಿವಿಟಿ ದರ ಶೇಕಡ 0.48 ರಷ್ಟಿದೆ. 12,565 ಸಕ್ರಿಯ ಪ್ರಕರಣಗಳಿವೆ.
ರಾಜಧಾನಿ ಬೆಂಗಳೂರಿನಲ್ಲಿ ಇಂದು ಹೊಸದಾಗಿ 239 ಜನರಿಗೆ ಸೋಂಕು ತಗುಲಿದ್ದು, 7 ಮಂದಿ ಮೃತಪಟ್ಟಿದ್ದಾರೆ. 141 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 7509 ಸಕ್ರಿಯ ಪ್ರಕರಣಗಳಿವೆ.
ಜಿಲ್ಲಾವಾರು ಮಾಹಿತಿ:
ಬಾಗಲಕೋಟೆ 1, ಬಳ್ಳಾರಿ 1, ಬೀದರ್ 3, ಚಾಮರಾಜನಗರ 2, ಚಿಕ್ಕಮಗಳೂರು 4, ಚಿಕ್ಕಬಳ್ಳಾಪುರ 0, ದಾವಣಗೆರೆ 2, ಧಾರವಾಡ 5, ಗದಗ 2, ಹಾವೇರಿ 1, ಕಲ್ಬುರ್ಗಿ 2, ಕೊಪ್ಪಳ 1, ರಾಯಚೂರು 0, ರಾಮನಗರ 3, ವಿಜಯಪುರ 0, ಯಾದಗಿರಿ 0, ಬೆಂಗಳೂರು ನಗರ 239, ದಕ್ಷಿಣಕನ್ನಡ 75, ಹಾಸನ 21, ಕೊಡಗು 36, ಮೈಸೂರು 31, ಹೊಸ ಪ್ರಕರಣ ವರದಿಯಾಗಿದೆ.
ಮೃತಪಟ್ಟವರ ಸಂಖ್ಯೆ:
ಬೆಂಗಳೂರು ಗ್ರಾಮಾಂತರ 1, ಬೆಂಗಳೂರು ನಗರ 7, ದಕ್ಷಿಣ ಕನ್ನಡ 3, ದಾವಣಗೆರೆ 1, ಧಾರವಾಡ 1, ಗದಗ 1, ಹಾಸನ 1, ಹಾವೇರಿ 1 ಸೇರಿ ರಾಜ್ಯದಲ್ಲಿ 17 ಸೋಂಕಿತರು ಸಾವನ್ನಪ್ಪಿದ್ದಾರೆ.