alex Certify ಒಮಿಕ್ರಾನ್ ಆತಂಕದ ನಡುವೆ ರಾಜ್ಯದಲ್ಲಿಂದು 363 ಜನರಿಗೆ ಕೊರೋನಾ ಸೋಂಕು ದೃಢ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಒಮಿಕ್ರಾನ್ ಆತಂಕದ ನಡುವೆ ರಾಜ್ಯದಲ್ಲಿಂದು 363 ಜನರಿಗೆ ಕೊರೋನಾ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಇಂದು ಇಬ್ಬರಿಗೆ ಒಮಿಕ್ರಾನ್ ದೃಢಪಟ್ಟಿದ್ದು, 363 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ.

ಇಂದು ಮೂವರು ಕೊರೋನಾ ಸೋಂಕಿತರು ಮೃತಪಟ್ಟಿದ್ದಾರೆ. 191 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 29,96,833 ಕ್ಕೆ ಏರಿಕೆಯಾಗಿದೆ. ಇದುವರೆಗೆ 38.216 ಸೋಂಕಿತರು ಮೃತಪಟ್ಟಿದ್ದಾರೆ. 29,51,845 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಪಾಸಿಟಿವಿಟಿ ಶೇಕಡ 0.34 ರಷ್ಟು ಇದೆ. 6743 ಸಕ್ರಿಯ ಪ್ರಕರಣಗಳು ಇವೆ.

ರಾಜಧಾನಿ ಬೆಂಗಳೂರಿನಲ್ಲಿ ಇಂದು ಹೊಸದಾಗಿ 206 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, ಇಬ್ಬರು ಮೃತಪಟ್ಟಿದ್ದಾರೆ. 105 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 5024 ಸಕ್ರಿಯ ಪ್ರಕರಣಗಳು ಇವೆ.

ವಿಜಯಪುರ, ಯಾದಗಿರಿ, ರಾಮನಗರ, ಗದಗ, ಬೀದರ್ ಹೊರತುಪಡಿಸಿ ಉಳಿದ ಎಲ್ಲ ಜಿಲ್ಲೆಗಳಲ್ಲಿ ಕೇಸ್ ಪತ್ತೆಯಾಗಿವೆ. ಬೆಂಗಳೂರು ನಗರ 206, ಚಾಮರಾಜನಗರ 12, ದಕ್ಷಿಣಕನ್ನಡ 20, ಮೈಸೂರು 19, ಉಡುಪಿ ಉತ್ತರಕನ್ನಡ 22 ಹೊಸ ಪ್ರಕರಣ ವರದಿಯಾಗಿವೆ. ಬೆಂಗಳೂರು ನಗರ 2, ಹಾಸನ 1 ಸೇರಿ ರಾಜ್ಯದಲ್ಲಿ ಇಂದು ಮೂರು ಜನ ಸೋಂಕಿತರು ಮೃತಪಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...