![](https://kannadadunia.com/wp-content/uploads/2021/12/bommai5.jpg)
ಬೆಂಗಳೂರು: ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ ಜತೆ ಜೆಡಿಎಸ್ ಮೈತ್ರಿ ಪ್ರಶ್ನೆಯೇ ಇಲ್ಲ ಎಂಬ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ ಬಸವರಾಜ್ ಬೊಮ್ಮಾಯಿ, ಅವರ ಪಕ್ಷದ ನಿರ್ಧಾರ ಅವರು ಮಾಡಿದ್ದಾರೆ. ಇದರಲ್ಲಿ ವಿಶೇಷವೇನಿಲ್ಲ ಎಂದಿದ್ದಾರೆ.
ಬೆಳಗಾವಿಯಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳು ಇಲ್ಲದಕಡೆಗಳಲ್ಲಿ ಬಿಜೆಪಿಗೆ ಬೆಂಬಲ ನೀಡುವಂತೆ ನಮ್ಮ ಹಿರಿಯ ನಾಯಕರು ತಮ್ಮ ವಿಚಾರ ವ್ಯಕ್ತಪಡಿಸಿದ್ದರು. ಜೆಡಿಎಸ್ ನಾಯಕರು ಅವರ ಪಕ್ಷದ ನಿರ್ಧಾರವನ್ನು ಅವರು ಕೈಗೊಂಡಿದ್ದಾರೆ. ಇದರಲ್ಲಿ ಹೆಚ್ಚಿನ ಚರ್ಚೆ ಅಗತ್ಯವಿಲ್ಲ ಎಂದರು.
ಪರಿಷತ್ ಚುನಾವಣೆಯಲ್ಲಿ ಆತಂಕವಿರುವುದು ಕಾಂಗ್ರೆಸ್ ಗೆ ಹೊರತು ಬಿಜೆಪಿಗಲ್ಲ. ಈ ಬಾರಿ ಅತಿ ಹೆಚ್ಚು ಬಿಜೆಪಿ ಶಾಸಕರು ಆಯ್ಕೆಯಾಗಲಿದ್ದಾರೆ. ರಾಜಕಾರಣ ಮುಂದಿನ ಒಂದು ವರ್ಷ ತೀವ್ರವಾಗಿ ನಡೆಯುತ್ತೆ. ಕಾಂಗ್ರೆಸ್ ನಾಯಕರು ಈಗಲೇ ಹತಾಶರಾಗಿದ್ದಾರೆ. ಕಾಂಗ್ರೆಸ್ ನಾಯಕರಿಂದ ನಮಗೆ ಸರ್ಟಿಫಿಕೇಟ್ ಅಗತ್ಯವಿಲ್ಲ. ಅಧಿಕಾರವಿದ್ದಾಗ ಅಭಿವೃದ್ಧಿ ಕೆಲಸ ಮಾಡದೇ ದೂರವುಳಿದು ಈಗ ಚುನಾವಣೆ ಹತ್ತಿರವಾಗುತ್ತಿದ್ದಂತೆ ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.