![](https://kannadadunia.com/wp-content/uploads/2021/11/Coronavirus-1-1140x570-1.jpg)
ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 263 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, 7 ಜನ ಸೋಂಕಿತರು ಮೃತಪಟ್ಟಿದ್ದಾರೆ. 327 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 30,00,934 ಕ್ಕೆ ಏರಿಕೆಯಾಗಿದ್ದು ಇದುವರೆಗೆ 38,275 ಸೋಂಕಿತರು ಮೃತಪಟ್ಟಿದ್ದಾರೆ. 29,55, 465 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ 7165 ಸಕ್ರಿಯ ಪ್ರಕರಣಗಳು ಇವೆ. ಪಾಸಿಟಿವಿಟಿ ದರ ಶೇಕಡ 0.36 ರಷ್ಟಿದೆ.
ರಾಜಧಾನಿ ಬೆಂಗಳೂರಿನಲ್ಲಿ ಇಂದು 155 ಜನರಿಗೆ ಕೊರೋನಾ ಸೋಂಕು ತಗುಲಿದ್ದು, ಒಬ್ಬರು ಮೃತಪಟ್ಟಿದ್ದಾರೆ. 182 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 5506 ಸಕ್ರಿಯ ಪ್ರಕರಣಗಳು ಇವೆ.
ಬಾಗಲಕೋಟೆ, ಬಳ್ಳಾರಿ, ಚಾಮರಾಜನಗರ, ದಾವಣಗೆರೆ, ಗದಗ, ಹಾವೇರಿ, ಕೋಲಾರ, ಕೊಪ್ಪಳ, ರಾಮನಗರ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಇಂದು ಯಾವುದೇ ಪ್ರಕರಣ ವರದಿಯಾಗಿಲ್ಲ. ಬೆಂಗಳೂರು ನಗರ 158, ಚಿಕ್ಕಮಗಳೂರು 11, ದಕ್ಷಿಣಕನ್ನಡ 13, ಕೊಡಗು 14, ಮೈಸೂರು 16 ಹೊಸ ಪ್ರಕರಣ ವರದಿಯಾಗಿವೆ.
ಬೆಳಗಾವಿ, ಬೆಂಗಳೂರು ನಗರ, ಬೀದರ್, ತುಮಕೂರು ಜಿಲ್ಲೆಯಲ್ಲಿ ತಲಾ ಒಬ್ಬರು, ಚಿಕ್ಕಮಗಳೂರು ಜಿಲ್ಲೆಯಲ್ಲಿ ಇಬ್ಬರು ಸೇರಿ 7 ಜನ ಸೋಂಕಿತರು ಮೃತಪಟ್ಟಿದ್ದಾರೆ.
![](https://kannadadunia.com/wp-content/uploads/2021/12/dec-14-corona-A.jpg)
![](https://kannadadunia.com/wp-content/uploads/2021/12/dec-14-corona-B.jpg)