alex Certify BIG NEWS: ರಾಜ್ಯದಲ್ಲಿಂದು 60914 ಜನ ಗುಣಮುಖ, ಬೆಂಗಳೂರಲ್ಲೂ ಕೊರೋನಾ ಇಳಿಮುಖ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯದಲ್ಲಿಂದು 60914 ಜನ ಗುಣಮುಖ, ಬೆಂಗಳೂರಲ್ಲೂ ಕೊರೋನಾ ಇಳಿಮುಖ

ಬೆಂಗಳೂರು: ರಾಜ್ಯದಲ್ಲಿ ಇಂದು 14,366 ಜನರಿಗೆ ಕೊರೋನಾ ಸೋಂಕು ತಗುಲಿದ್ದು, 58 ಜನ ಸೋಂಕಿತರು ಮೃತಪಟ್ಟಿದ್ದಾರೆ. 60,914 ಜನ ಗುಣಮುಖರಾಗಿದ್ದಾರೆ.

ಒಟ್ಟು ಸೋಂಕಿತರ ಸಂಖ್ಯೆ 38,23,833 ಕ್ಕೆ ಏರಿಕೆಯಾಗಿದ್ದು, ಇದುವರೆಗೆ 39,056 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. 35,87,022 ಜನ ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ 1,97,725 ಸಕ್ರಿಯ ಪ್ರಕರಣಗಳಿದ್ದು, ಪಾಸಿಟಿವಿಟಿ ದರ ಶೇಕಡ 13.45 ರಷ್ಟು ಇದೆ.

ರಾಜಧಾನಿ ಬೆಂಗಳೂರಿನಲ್ಲಿ ಇಂದು ಹೊಸದಾಗಿ 6685 ಜನರಿಗೆ ಸೋಂಕು ತಗುಲಿದ್ದು, 9 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. 35,589 ಜನ ಗುಣಮುಖರಾಗಿದ್ದಾರೆ. 1,05,125 ಸಕ್ರಿಯ ಪ್ರಕರಣಗಳಿವೆ.

ಬೆಳಗಾವಿ 1081, ಧಾರವಾಡ 633,‌ ಮೈಸೂರು 777, ತುಮಕೂರು 573, ಉತ್ತರಕನ್ನಡ 551 ಜನರಿಗೆ ಹೊಸದಾಗಿ ಕೊರೋನಾ ಸೋಂಕು ತಗುಲಿದೆ.

ಬೆಂಗಳೂರು ನಗರ 9, ದಕ್ಷಿಣಕನ್ನಡ 7, ಶಿವಮೊಗ್ಗ 3, ಉಡುಪಿ 4, ಮಂಡ್ಯ 5, ಮೈಸೂರು 7, ಸೇರಿ ರಾಜ್ಯದಲ್ಲಿ 58 ಸೋಂಕಿತರು ಸಾವನ್ನಪ್ಪಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...