alex Certify BIG NEWS: ಸ್ವಾಮೀಜಿಗಳಿಗೆ ಅವಮಾನ ಮಾಡಿಲ್ಲ, ಅಗೌರವ ತೋರಿಲ್ಲ: ಹೇಳಿಕೆ ತಿರುಚಿ ಅಪಪ್ರಚಾರ; ಸಿದ್ಧರಾಮಯ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸ್ವಾಮೀಜಿಗಳಿಗೆ ಅವಮಾನ ಮಾಡಿಲ್ಲ, ಅಗೌರವ ತೋರಿಲ್ಲ: ಹೇಳಿಕೆ ತಿರುಚಿ ಅಪಪ್ರಚಾರ; ಸಿದ್ಧರಾಮಯ್ಯ

ನಮ್ಮ ತಾಯಂದಿರು ಸೇರಿದಂತೆ ಸಾಮಾನ್ಯವಾಗಿ ಎಲ್ಲರೂ ತಲೆಮೇಲೆ ಬಟ್ಟೆ ಹಾಕಿಕೊಳ್ಳುತ್ತಾರೆ ಎಂದು ಹೇಳಿದ್ದೆನೆಯೇ ಹೊರತು, ಸ್ವಾಮೀಜಿಗಳಿಗೆ ಅವಮಾನ ಮಾಡಿಲ್ಲ, ಅಗೌರವ ತೋರಿಲ್ಲ. ಅನಗತ್ಯವಾಗಿ ನನ್ನ ಹೇಳಿಕೆಯನ್ನು ತಿರುಚಲಾಗಿದೆ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ.

ಸರ್ವ ಜಾತಿಗಳ ಸ್ವಾಮೀಜಿಗಳ ಬಗ್ಗೆ ನನಗೆ ಗೌರವವಿದೆ, ದೀರ್ಘಕಾಲದಿಂದ ನನಗೆ ಅವರ ಜೊತೆ ಹಾರ್ದಿಕ ಸಂಬಂಧ ಇದೆ. ಯಾವ ಸ್ವಾಮೀಜಿಗಳ ಬಗ್ಗೆಯೂ, ಯಾವಾಗಲೂ ನಾನು ಅಗೌರವದಿಂದ ನಡೆದುಕೊಂಡಿಲ್ಲ‌ ಎನ್ನುವುದು ರಾಜ್ಯದ ಜನತೆಗೆ ಗೊತ್ತಿದೆ ಎಂದು ತಿಳಿಸಿದ್ದಾರೆ.

ರಾಜಕೀಯ ವಿರೋಧಿಗಳು ದುರುದ್ದೇಶದಿಂದ ನನ್ನ ಹೇಳಿಕೆಯನ್ನು ತಿರುಚಿ ಅಪಪ್ರಚಾರ ಮಾಡುತ್ತಿದ್ದಾರೆ. ಇದಕ್ಕೆ ಕೆಲವು ಮಾಧ್ಯಮಗಳು‌ ಕೂಡಾ ಸಾಥ್ ನೀಡಿರುವುದು‌ ವಿಷಾದನೀಯ ಬೆಳವಣಿಗೆಯಾಗಿದೆ. ನನ್ನ ಹೇಳಿಕೆಯನ್ನು ತಿರುಚಿರುವುದು ರಾಜ್ಯದ ಪ್ರಮುಖ ಮಠಗಳ ಹಿರಿಯ ಸ್ವಾಮೀಜಿಗಳಿಗೆ ಅರ್ಥವಾಗಿರುವ ಕಾರಣಕ್ಕಾಗಿಯೇ ಅವರು ಮೌನವಾಗಿದ್ದಾರೆ. ಅವರೆಲ್ಲರಿಗೂ ನನ್ನ ಕೃತಜ್ಞತಾಪೂರ್ವಕ ನಮನಗಳು ಎಂದು ಟ್ವೀಟ್ ಮಾಡಿದ್ದಾರೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...