alex Certify ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಪೂರೈಸಿದ ವಿಜಯಪುರ ಜಿಲ್ಲೆ ರೈತರಿಗೆ ಇಲ್ಲಿದೆ ಗುಡ್‌ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಪೂರೈಸಿದ ವಿಜಯಪುರ ಜಿಲ್ಲೆ ರೈತರಿಗೆ ಇಲ್ಲಿದೆ ಗುಡ್‌ ನ್ಯೂಸ್

ವಿಜಯಪುರ: ಕಬ್ಬು ಪೂರೈಕೆ ಮಾಡಿರುವ ರೈತರಿಗೆ ಏಪ್ರಿಲ್ 30ರೊಳಗಾಗಿ ಹಣ ಪಾವತಿಸುವಂತೆ ವಿಜಯಪುರ ಜಿಲ್ಲಾಧಿಕಾರಿ ಡಾ. ವಿಜಯ್ ಮಹಾಂತೇಶ ದಾನಮ್ಮನವರ ವಿಜಯಪುರ ಜಿಲ್ಲೆಯ ಸಕ್ಕರೆ ಕಾರ್ಖಾನೆಗಳಿಗೆ ಎಚ್ಚರಿಕೆ ನೀಡಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಜಿಲ್ಲಾಧಿಕಾರಿಗಳು ರೈತರಿಗೆ ಹಣ ಪಾವತಿ ಸಂಬಂಧ ವಿಜಯಪುರ ಜಿಲ್ಲೆಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿದ್ದರು.

ಏಪ್ರಿಲ್ 30ರ ಒಳಗಾಗಿ ಕಬ್ಬು ಪೂರೈಸಿದ ಎಲ್ಲಾ ರೈತರಿಗೂ ಹಣ ಪಾವತಿಸುವಂತೆ ಸಕ್ಕರೆ ಕಾರ್ಖಾನೆಗಳಿಗೆ ಸೂಚಿಸಿದ್ದರು. ಹಿಂದಿನ ಸಭೆಯಲ್ಲಿ ಕಬ್ಬು ಪೂರೈಸಿದ ರೈತರಿಗೆ ತಕ್ಷಣವೇ ಹಣ ಬಿಡುಗಡೆಗೊಳಿಸಬೇಕು ಎಂದು ಕಾರ್ಖಾನೆಗಳಿಗೆ ನಿರ್ದೇಶನ ನೀಡಿದ್ದರು. ರೈತರಿಗೆ ನೀಡಲಾಗಿರುವ ಹಣದ ಪ್ರಗತಿಯು ಶೇಕಡ 74 ರಷ್ಟು ಮುಕ್ತಾಯಗೊಂಡಿದ್ದು, ಬಾಕಿ ಮೊತ್ತವನ್ನು ಏಪ್ರಿಲ್ 30ರೊಳಗಾಗಿ ಪಾವತಿಸುವಂತೆ ಸಕ್ಕರೆ ಕಾರ್ಖಾನೆಗಳಿಗೆ ಸೂಚಿಸಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...