alex Certify ಕಬ್ಬಿನ ಗದ್ದೆಗೆ ಹೋಗುವಾಗಲೇ ಆಘಾತಕಾರಿ ಘಟನೆ: ದಿಢೀರ್ ಚಿರತೆ ದಾಳಿ, 15 ನಿಮಿಷ ಹೋರಾಡಿ ಪ್ರಾಣ ಉಳಿಸಿಕೊಂಡ ರೈತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಬ್ಬಿನ ಗದ್ದೆಗೆ ಹೋಗುವಾಗಲೇ ಆಘಾತಕಾರಿ ಘಟನೆ: ದಿಢೀರ್ ಚಿರತೆ ದಾಳಿ, 15 ನಿಮಿಷ ಹೋರಾಡಿ ಪ್ರಾಣ ಉಳಿಸಿಕೊಂಡ ರೈತ

ಮಂಡ್ಯ: ಕಬ್ಬಿನ ಗದ್ದೆಗೆ ತೆರಳುತ್ತಿದ್ದ ರೈತನ ಮೇಲೆ ಚಿರತೆ ದಾಳಿ ಮಾಡಿದ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನಯ ಹೆಚ್. ಹೊಸೂರು ಗ್ರಾಮದಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಚಿರತೆ ಏಕಾಏಕಿ ದಾಳಿ ಮಾಡಿದೆ.

ಚಿರತೆಯೊಂದಿಗೆ 15 ನಿಮಿಷ ಹೋರಾಡಿ ರೈತ ಪ್ರಾಣ ಉಳಿಸಿಕೊಂಡಿದ್ದಾರೆ. ರೈತ ಜಗದೀಶ್ ಅವರಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ಮೂರು ದಿನಗಳಿಂದ ಹೊಸಹಳ್ಳಿ, ಕೆಂಬೂತನಗೆರೆಯಲ್ಲಿ ಚಿರತೆ ದಾಳಿ ಮಾಡುತ್ತಿದೆ. ಎರಡು ಮೇಕೆಗಳನ್ನು ಚಿರತೆ ಹೊತ್ತೊಯ್ದಿದ್ದು, ಅರಣ್ಯ ಇಲಾಖೆ ಅಧಿಕಾರಿಗಳಿಗೆ ವಿಷಯ ತಿಳಿಸಿದರೂ ನಿರ್ಲಕ್ಷ್ಯ ತೋರಿದ್ದಾರೆ. ಬೋನ್ ಇರಿಸಿ ಚಿರತೆ ಸೆರೆ ಹಿಡಿಯಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...